28.8 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಣಕಜೆ ಬಳಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

ಬೆಳ್ತಂಗಡಿ: ಪಣಕಜೆ ಮಸೀದಿ ಸಮೀಪ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಮೃತ ಯುವಕ ಉಜಿರೆ ನಿವಾಸಿ ರಿನ್ಸ್ ಶಿಬಿ (24ವ) ಎಂಬಾತನಾಗಿದ್ದಾನೆ.
ಮಂಗಳವಾರ ಸಂಜೆಯ ವೇಳೆ ಪಣಕಜೆಯಲ್ಲಿ ಟೆಂಪೋದ ಹಿಂಬದಿಗೆ ಬೈಕ್ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದು ರಿನ್ಸ್ ಶಿಬಿ ಗಂಭೀರವಾಗಿ ಗಾಯಗೊಂಡಿದ್ದ ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಆತ ಮೃತಪಟ್ಟಿದ್ದಾನೆ. ಘಟನೆಯ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಿನ್ಸ್ ಕಾಂಗ್ರೆಸ್ ಪಕ್ಷದ‌ ಸಕ್ರಿಯ ಕಾರ್ಯಕರ್ತನಾಗಿದ್ದು ಯುವ ಕಾಂಗ್ರೆಸ್ ನಲ್ಲಿ ಜವಾಬ್ದಾರಿಗಳನ್ನು ವಹಿಸಿಕೊಂಡಿದ್ದ. ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ರಿನ್ಸ್ ನ ಕೈ ಹಿಡಿದು ನಡೆಯುವ ಫೊಟೋ ವೈರಲ್‌ಆಗಿತ್ತು.

Related posts

ಬೆಳ್ತಂಗಡಿ ತಾಲೂಕು ಆಡಳಿತ ಸೌಧಕ್ಕೆ ದ.ಕ.ಜಿಲ್ಲಾಧಿಕಾರಿ ಮುಲೈ ಮುಹಿಲನ್ ಧಿಡೀರ್ ಭೇಟಿ

Suddi Udaya

ಸಿ.ಎ ಪರೀಕ್ಷೆಯಲ್ಲಿ ನಾರಾವಿಯ ಕು.ಸಂಗೀತಾ ಜಿ. ಹೆಗ್ಡೆ ತೇರ್ಗಡೆ

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 93 ಒಕ್ಕೂಟಗಳ ಕೇಂದ್ರ ಒಕ್ಕೂಟದ ಸಭೆ

Suddi Udaya

ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಭಿನ್ನಮತ ಸ್ಫೋಟ: ಎರಡು ಬಣಗಳ ನಡುವೆ ಮಾತಿನ ಚಕಮಕಿ: ಬೆಳ್ತಂಗಡಿ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಬುಗಿಲೆದ್ದ ಭಿನ್ನಮತ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮಸಭೆ

Suddi Udaya

ಬಂದಾರು ಗ್ರಾಮ ಓಟೆಚ್ಚಾರಿನಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಮತ್ತು ಸೊತ್ತುಗಳಿಗೆ ಹಾನಿ

Suddi Udaya
error: Content is protected !!