29.9 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಮಟ್ಟದ ಭತ್ತ ಬೆಳೆ ಪ್ರಶಸ್ತಿಗೆ ಸೆ.30ರ ತನಕ ಅರ್ಜಿ ಸಲ್ಲಿಸಲು ಅವಕಾಶ

ಬೆಳ್ತಂಗಡಿ: ಕೃಷಿ ಪ್ರಶಸ್ತಿ ಯೋಜನೆಯಡಿಯಲ್ಲಿ ನೀಡಲಾಗುವ ಮುಂಗಾರು 2026-27ನೇ ಸಾಲಿನ ತಾಲೂಕು ಮಟ್ಟದ ಭತ್ತದ ಬೆಳೆ ಸ್ಪರ್ಧೆ (ಪ್ರಶಸ್ತಿ)ಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿದೆ. ಭತ್ತದ ಬೆಳೆ ಸ್ಪರ್ಧೆಗೆ ಸ್ಪರ್ಧಿಸಲು ರೈತನು ಕನಿಷ್ಠ ವಿಸ್ತೀರ್ಣ 1 ಎಕರೆ ಭತ್ತ ಇರಬೇಕು.

ಒಂದು ಬಾರಿ ಪ್ರಶಸ್ತಿ ಪಡೆದ ಕುಟುಂಬದವರು ಪುನಃ 5 ವರ್ಷಗಳವರೆಗೆ ಆ ಹಂತದ ಸ್ಪರ್ಧೆಗೆ ಭಾಗವಹಿಸುವಂತಿಲ್ಲ. ಕಂದಾಯ ದಾಖಲೆ ಪ್ರಕಾರ ಖಾತೆ ಹೊಂದಿರುವ ಹಾಗೂ ಸ್ವತಃ ಬೇಸಾಯದಲ್ಲಿ ತೊಡಗಿರುವ ಸ್ವಯಂ ಕ್ರಿಯಾಶೀಲ ಕೃಷಿಕನಾಗಿರಬೇಕು. ಒಂದು ಕುಟುಂಬದಿAದ ಒಬ್ಬರು ಮಾತ್ರ ಭಾಗವಹಿಸಬೇಕು. ಕೇಂದ್ರ, ರಾಜ್ಯ ಸರಕಾರಿ ಸೇವೆಯಲ್ಲಿರುವ ಯಾವುದೇ ಇಲಾಖೆ, ಪುರುಷ ವಿಭಾಗ ಪ್ರತ್ಯೇಕವಾಗಿದ್ದು, ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಬೇಕಾಗುವ ದಾಖಲೆಗಳು: 1ಎಕರೆ ಮೇಲ್ಪಟ್ಟ ಭತ್ತದ ಪಹಣಿ, ಆಧಾರ್ ಮತ್ತು ಬ್ಯಾಂಕ್ ಖಾತೆ ಪುಸ್ತಕದ ಪ್ರತಿ ಮತ್ತು ರೈತರ ಪೊಟೋ, ಆಸಕ್ತ ಭತ್ತ ಬೆಳೆಗಾರರು ಬೆಳ್ತಂಗಡಿ, ಕೊಕ್ಕಡ, ವೇಣೂರು, ರೈತ ಸಂಪರ್ಕ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೆಶಕರ ಪ್ರಕಟಣೆ ತಿಳಿಸಿದೆ.

Related posts

ಬೆಳ್ತಂಗಡಿ: ಕನ್ನಾಜೆ ನಿವಾಸಿ ಕುಸುಮ ನಿಧನ

Suddi Udaya

ಗೆಡ್ಡೆ (tumor) ಕಾಯಿಲೆಯಿಂದ ಬಳಲುತ್ತಿರುವ ಕಳೆಂಜದ ಪುರುಷೋತ್ತಮರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕಣಿಯೂರು ಬಿಜೆಪಿ ಬೂತ್ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಕಾಂಗ್ರೇಸ್ ಸೇರ್ಪಡೆ

Suddi Udaya

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪದವಿಪೂರ್ವ ಕಾಲೇಜು ವಿಭಾಗದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮಾಲಾಡಿ: ಕೆತ್ತಿಗುಡ್ಡೆ ಹೊಸ ರಸ್ತೆ ಮತ್ತು ಸಂಪರ್ಕ ಸೇತುವೆ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ ಮಂಜೂರು

Suddi Udaya
error: Content is protected !!