September 2, 2026
Uncategorized

ಬಾಂಜಾರು ಮಲೆಕುಡಿಯ ಕಾಲೋನಿಯ ಜಮೀನಿನ ಮೇಲೆ ಹೈಕೋರ್ಟ್ ನಲ್ಲಿ ರಾಜ್ಯ ಸರ್ಕಾರ ದಾಖಲಿಸಿರುವ ರಿಟ್ ಅರ್ಜಿಯನ್ನು ವಾಪಸ್ ಪಡೆಯುವ ಬಗ್ಗೆ ಮಂಗಳೂರಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲುಮನವಿ

ಬೆಳ್ತಂಗಡಿ: ನೆರಿಯ ಗ್ರಾಮದ ಬಾಂಜಾರು ಮಲೆಕುಡಿಯ ಕಾಲೋನಿಯ ಜಮೀನಿನ ಮೇಲೆ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ರಾಜ್ಯ ಸರ್ಕಾರ ದಾಖಲಿಸಿರುವ ರಿಟ್ ಅರ್ಜಿ 3639/2007 ಹಾಗೂ ಇತರೆ ಪ್ರಕರಣಗಳನ್ನು ವಾಪಸ್ ಪಡೆಯುವ ಬಗ್ಗೆ ಮಂಗಳೂರಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಬಗ್ಗೆ ವಿಧಾನ ಪರಿಷತ್ ಸದಸ್ಯ , ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಅವರನ್ನು ಬೆಂಗಳೂರಿನ ನಿವಾಸದಲ್ಲಿ ಬುಧವಾರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಭೇಟಿಯಾಗಿ ಮನವಿ ಸಲ್ಲಿಸಲಾಯಿತು.

ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಬಾಂಜಾರು ಮಲೆಕುಡಿಯ ಕಾಲೋನಿಯಲ್ಲಿ 47 ಕುಟುಂಬಗಳು ಶತಮಾನಗಳಿಂದ ವಾಸಿಸುತ್ತಿದ್ದಾರೆ. ಈ ಕುಟುಂಬಗಳ ಪೈಕಿ 37 ಕುಟುಂಬಗಳಿಗೆ ಭೂನ್ಯಾಯ ಮಂಡಳಿಯಿಂದ ಭೂಸುಧಾರಣಾ ಕಾಯ್ದೆಯಂತೆ ಜಮೀನು ಮಂಜೂರುಗೊಂಡಿತ್ತು. ಈ ಜಮೀನನ್ನು ರದ್ದು ಕೋರಿ ರಾಜ್ಯ ಸರ್ಕಾರ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ 3639/2007 ಸಲ್ಲಿಸಲಾಗಿದೆ. ಇದಲ್ಲದೆ ಇದೇ ಜಮೀನಿನ ಮೇಲೆ ಇತರೆ ಪ್ರಕರಣಗಳನ್ನು ದಾಖಲಿಸಲಾಗಿದ್ದು , ಇದರಿಂದಾಗಿ ಬಾಂಜಾರು ಮಲೆಕುಡಿಯ ಕಾಲೋನಿಯ ಕುಟುಂಬಗಳು ತೀವ್ರ ತೊಂದರೆ ಉಂಟಾಗಿದೆ. ಪ್ರತಿ ಕುಟುಂಬಗಳು 4 ರಿಂದ 6 ಎಕರೆ ತನಕವೂ ಜಮೀನು ಹೊಂದಿದ್ದು , ಮನೆ ನಿರ್ಮಾಣ ಮಾಡಿ , ಕೃಷಿ ಕೃತಾವಳಿಗಳನ್ನು ಬರುತ್ತಿದ್ದಾರೆ. ರಾಜ್ಯ ಉಚ್ಚ ನ್ಯಾಯಾಲಯದ ರಿಟ್ ಅರ್ಜಿ ಹಾಗೂ ಇತರೆ ಪ್ರಕರಣಗಳಲ್ಲಿ ತಮ್ಮ ಜಮೀನನ್ನು ಕಳೆದುಕೊಳ್ಳುವ ಭೀತಿ ಉಂಟಾಗಿದ್ದು , ರಾಜ್ಯ ಸರ್ಕಾರ ತಕ್ಷಣ ಬಾಂಜಾರು ಮಲೆಕುಡಿಯ ಕಾಲೋನಿಯ ಜಮೀನಿನ ಮೇಲೆ ಹಾಕಿರುವ ರಿಟ್ ಅರ್ಜಿ ಹಾಗೂ ಇತರೆ ಪ್ರಕರಣಗಳನ್ನು ವಾಪಸ್ ಪಡೆಯುವ ಐತಿಹಾಸಿಕ ತೀರ್ಮಾನವನ್ನು ಮಂಗಳೂರಿನಲ್ಲಿ ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳುವ ಅಗತ್ಯವಿದೆ ಎಂದು ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ತಾಲೂಕು ಪ್ರಧಾನ ಕಾರ್ಯದರ್ಶಿ ಜಯಾನಂದ ಪಿಲಿಕಲ , ಸಂಚಾಲಕ ಶೇಖರ್ ಲಾಯಿಲ ಉಪಸ್ಥಿತರಿದ್ದರು.

Related posts

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಅರಿಕೆಗುಡ್ಡೆ ಸಭಾಭವನಕ್ಕೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ. 5 ಲಕ್ಷ ಅನುದಾನ ಮಂಜೂರು

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡಿಸಿದ 17ನೇ ಬಜೆಟ್ ಸರ್ವರಿಗೂ ಸಮಪಾಲು ನೀಡಿರುವ ಐತಿಹಾಸಿಕ ಬಜೆಟ್: ರಕ್ಷಿತ್ ಶಿವರಾಂ

Suddi Udaya

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya
error: Content is protected !!