29.9 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೆ.6: ಎಕ್ಸೆಲ್‌ನಲ್ಲಿ ಗೋಕುಲದ ಗೋಪಾಲ–ಬೃಂದಾವನದ ರಾಧೆ ಸ್ಪರ್ಧೆ: ಎಲ್ಲರಿಗೂ ಮುಕ್ತ ಅವಕಾಶ

ಗುರುವಾಯನಕೆರೆ: ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಎಕ್ಸೆಲ್ ಟೆಕ್ನೋ ಸ್ಕೂಲ್, ಗುರುವಾಯನಕೆರೆ ವತಿಯಿಂದ ಮಕ್ಕಳಿಗಾಗಿ ‘ಗೋಕುಲದ ಗೋಪಾಲ–ಬೃಂದಾವನದ ರಾಧೆ’ ವೇಷಭೂಷಣ ಸ್ಪರ್ಧೆಯನ್ನು ಸೆ.6ರಂದು ಬೆಳಗ್ಗೆ 9.30ಕ್ಕೆ ಭಾನುವಾರ ಆಯೋಜಿಸಲಾಗಿದೆ.

ಸ್ಪರ್ಧೆಯಲ್ಲಿ ಎಲ್ಲ ಮಕ್ಕಳಿಗೂ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಜೂನಿಯರ್ ವಿಭಾಗದಲ್ಲಿ 1ರಿಂದ 3 ವರ್ಷದೊಳಗಿನ ಮಕ್ಕಳಿಗೆ ಹಾಗೂ ಸೀನಿಯರ್ ವಿಭಾಗದಲ್ಲಿ 3ರಿಂದ 6 ವರ್ಷದೊಳಗಿನ ಮಕ್ಕಳಿಗೆ ಸ್ಪರ್ಧೆ ನಡೆಯಲಿದೆ. ಎರಡೂ ವಿಭಾಗಗಳಲ್ಲಿಯೂ ಪ್ರಥಮ ಬಹುಮಾನ ರೂ.3,999 ಹಾಗೂ ಟ್ರೋಫಿ, ದ್ವಿತೀಯ ರೂ.2,999 ಹಾಗೂ ಟ್ರೋಫಿ, ತೃತೀಯ ರೂ.1,599 ಹಾಗೂ ಟ್ರೋಫಿ ನೀಡಲಾಗುತ್ತದೆ. 4ರಿಂದ 7ನೇ ಸ್ಥಾನದವರೆಗೆ ತಲಾ ರೂ.500 ಹಾಗೂ ಟ್ರೋಫಿ ಬಹುಮಾನವಿದೆ.

ಪ್ರತಿ ವಿಭಾಗದಲ್ಲೂ ಗೋಪಾಲ ಮತ್ತು ರಾಧೆ ಪಾತ್ರಗಳಿಗೆ ಪ್ರತ್ಯೇಕ ಬಹುಮಾನ ನೀಡಲಾಗುತ್ತದೆ. ಜೂನಿಯರ್ ವಿಭಾಗದಲ್ಲಿ ಅಮ್ಮನಿಗೆ ಕೃಷ್ಣ/ರಾಧೆಯಾಗಿ ಭಾಗವಹಿಸಲು ಅವಕಾಶವಿದೆ.

ಮಗುವಿನ ಜನನ ಪ್ರಮಾಣಪತ್ರದ ಪ್ರತಿಯನ್ನು ಕಡ್ಡಾಯವಾಗಿ ತರಬೇಕು. ನೋಂದಣಿಯನ್ನು ಸೆ.5ರಂದು ಸಂಜೆ 5 ಗಂಟೆಯೊಳಗೆ ಮಾಡಿಕೊಳ್ಳಬೇಕು. ಸ್ಪರ್ಧೆಯ ದಿನ ನೋಂದಣಿಗೆ ಅವಕಾಶವಿರುವುದಿಲ್ಲ. ಹಿನ್ನೆಲೆ ಸಂಗೀತಕ್ಕೆ ಅವಕಾಶವಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತರು ಹೆಚ್ಚಿನ ಮಾಹಿತಿಗಾಗಿ 6364156449, 9606455769 ಸಂಖ್ಯೆಯನ್ನು ಸಂಪರ್ಕಿಸಬಹುದು.

Related posts

“ಕಲಾ -ಸಂಭ್ರಮ 2024” ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಅಳದಂಗಡಿ ಸರಕಾರಿ ಪ್ರೌಢ ಶಾಲೆಗೆ ಪ್ರಶಸ್ತಿ

Suddi Udaya

ಗಾಂಧಿ ವಿಚಾರ ಸಂಸ್ಕಾರ ಪರೀಕ್ಷೆಯಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಸಾಧನೆ

Suddi Udaya

ಉಜಿರೆ:ಎಸ್‌.ಡಿ.ಎಂ ಅಂತರಾಷ್ಟ್ರೀಯ ಯೋಗ ಮತ್ತು ನ್ಯಾಚುರೋಪತಿ ಸಮ್ಮೇಳನದ ಸಮಾರೋಪ

Suddi Udaya

ಬೆಳ್ತಂಗಡಿ: ಸುರೇಶ್ ಪೂಜಾರಿ ಜೈಮಾತ ನಾಲ್ಕೂರು ಬಿಜೆಪಿ ಸೇರ್ಪಡೆ

Suddi Udaya

ಮಿಜಾರುಗುತ್ತು ಆನಂದ ಆಳ್ವ ರವರ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಪ್ರಕೃತಿ ವಿಸ್ಮಯ: ಕಡಿದ ಬಾಳೆಗಿಡದಲ್ಲಿ ಹೂ ಬಿಟ್ಟ ಬಾಳೆ ಗೊನೆ

Suddi Udaya
error: Content is protected !!