ಬೆಳ್ತಂಗಡಿ: ಕೃಷಿ ಪ್ರಶಸ್ತಿ ಯೋಜನೆಯಡಿಯಲ್ಲಿ ನೀಡಲಾಗುವ ಮುಂಗಾರು 2026-27ನೇ ಸಾಲಿನ ತಾಲೂಕು ಮಟ್ಟದ ಭತ್ತದ ಬೆಳೆ ಸ್ಪರ್ಧೆ (ಪ್ರಶಸ್ತಿ)ಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿದೆ. ಭತ್ತದ ಬೆಳೆ ಸ್ಪರ್ಧೆಗೆ ಸ್ಪರ್ಧಿಸಲು ರೈತನು ಕನಿಷ್ಠ ವಿಸ್ತೀರ್ಣ 1 ಎಕರೆ ಭತ್ತ ಇರಬೇಕು.
ಒಂದು ಬಾರಿ ಪ್ರಶಸ್ತಿ ಪಡೆದ ಕುಟುಂಬದವರು ಪುನಃ 5 ವರ್ಷಗಳವರೆಗೆ ಆ ಹಂತದ ಸ್ಪರ್ಧೆಗೆ ಭಾಗವಹಿಸುವಂತಿಲ್ಲ. ಕಂದಾಯ ದಾಖಲೆ ಪ್ರಕಾರ ಖಾತೆ ಹೊಂದಿರುವ ಹಾಗೂ ಸ್ವತಃ ಬೇಸಾಯದಲ್ಲಿ ತೊಡಗಿರುವ ಸ್ವಯಂ ಕ್ರಿಯಾಶೀಲ ಕೃಷಿಕನಾಗಿರಬೇಕು. ಒಂದು ಕುಟುಂಬದಿAದ ಒಬ್ಬರು ಮಾತ್ರ ಭಾಗವಹಿಸಬೇಕು. ಕೇಂದ್ರ, ರಾಜ್ಯ ಸರಕಾರಿ ಸೇವೆಯಲ್ಲಿರುವ ಯಾವುದೇ ಇಲಾಖೆ, ಪುರುಷ ವಿಭಾಗ ಪ್ರತ್ಯೇಕವಾಗಿದ್ದು, ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಬೇಕಾಗುವ ದಾಖಲೆಗಳು: 1ಎಕರೆ ಮೇಲ್ಪಟ್ಟ ಭತ್ತದ ಪಹಣಿ, ಆಧಾರ್ ಮತ್ತು ಬ್ಯಾಂಕ್ ಖಾತೆ ಪುಸ್ತಕದ ಪ್ರತಿ ಮತ್ತು ರೈತರ ಪೊಟೋ, ಆಸಕ್ತ ಭತ್ತ ಬೆಳೆಗಾರರು ಬೆಳ್ತಂಗಡಿ, ಕೊಕ್ಕಡ, ವೇಣೂರು, ರೈತ ಸಂಪರ್ಕ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೆಶಕರ ಪ್ರಕಟಣೆ ತಿಳಿಸಿದೆ.











