September 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌದಿ ಅರೇಬಿಯಾ ಬಿಲ್ಲವ ಅಸೋಸಿಯೇಷನ್ ನ ಉಪಾಧ್ಯಕ್ಷ ಗಿರೀಶ್ ಪೂಜಾರಿಯವರಿಂದ ವೇಣೂರು ಬಿಲ್ಲವ ಸಂಘಕ್ಕೆ ಕೊಳವೆಬಾವಿ ಕೊಡುಗೆ

ವೇಣೂರು ಶ್ರೀ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಗಸ್ಟ್ ತಿಂಗಳ ಮಾಸಿಕ ಸಭೆಗೆ ಸೌದಿ ಅರೇಬಿಯಾ ಬಿಲ್ಲವ ಅಸೋಸಿಯೇಷನ್ ಇದರ ಉಪಾಧ್ಯಕ್ಷ ಗಿರೀಶ್ ಪೂಜಾರಿ ನ್ಯೂ ಹಲೆಕ್ಕಿ ಮೂಡುಕೋಡಿ ಇವರು ಆಗಮಿಸಿ ಅವರನ್ನು ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಅವರು ಸಂಘದ ಪರವಾಗಿ ಶಾಲು ಹಾಕಿ ಗೌರವಿಸಿದರು.

ನಂತರ ಮಾತನಾಡಿದ ಗಿರೀಶ್ ಪೂಜಾರಿರವರು ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ಸೂಚಿಸಿ ಸಂಘಕ್ಕೆ ತನ್ನ ಸ್ವಂತ ಖರ್ಚಲ್ಲಿ ಒಂದು ಬೋರ್ವೆಲ್ ಅನ್ನು ನೀಡುವ ಭರವಸೆ ನೀಡಿ ಸಂಘದ ಸಭಾ ಭವನದ ಕಾರ್ಯಯೋಜನೆಗೆ ಮಾರ್ಗದರ್ಶನ ನೀಡಿದರು.

ಸಭೆಯಲ್ಲಿ ತಾಲ್ಲೂಕು ಬಿಲ್ಲವ ಸಂಘದ ನಿರ್ದೇಶಕರಾದ ವಿಶ್ವನಾಥ್ ದಡ್ಡಲಪಲ್ಕೆ, ಗಿರೀಶ್ ಕೆ.ಎಸ್, ಚಂದ್ರಶೇಖರ್ ಬಜಿರೆ, ಪ್ರಶಾಂತ್ ಗುತ್ತು, ದಿನೇಶ್ ತಾರಿಪಡ್ಪು, ನವೀನ್ ಪಚ್ಚೇರಿ, ರಾಜೇಶ್ ಕೈತೇರಿ, ಸಂಜೀವ ಮೂಡ್ಲ ಮತ್ತಿತರರು ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ರಾಕೇಶ್ ಕುಮಾರ್ ಸ್ವಾಗತಿಸಿ ಜೊತೆ ಕಾರ್ಯದರ್ಶಿ ಸತೀಶ್ ಉಜಿರ್ದಡ್ದ ವಂದಿಸಿದರು.

Related posts

ದ.ಕ‌ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಗೌರವಾನ್ವಿತ ರಾಜ್ಯಪಾಲರ ಭೇಟಿ: ಕು.ಸೌಜನ್ಯಳ ಹತ್ಯೆ ಪ್ರಕರಣದ ಮರುತನಿಖೆಗೆ ಮನವಿ ಸಲ್ಲಿಕೆ

Suddi Udaya

ಅರಸಿನಮಕ್ಕಿ ಸ. ಪ್ರೌ. ಶಾಲೆಯಲ್ಲಿ ಸ್ವಾತಂತ್ಯೋತ್ಸವ ದಿನಾಚರಣೆ ಪ್ರಯುಕ್ತ ಪ್ರತಿಭಾ ಪುರಸ್ಕಾರ – ಸನ್ಮಾನ ಕಾರ್ಯಕ್ರಮ

Suddi Udaya

ಇಳಂತಿಲ: ಬೃಹತ್ ಗಾತ್ರದಲ್ಲಿ ಗುಡ್ಡ ಕುಸಿತ : ಗ್ರಾ.ಪಂ. ಸದಸ್ಯ ತಿಮ್ಮಪ್ಪ ಗೌಡರ ನೇತೃತ್ವದಲ್ಲಿ ತೆರವು ಕಾರ್ಯ

Suddi Udaya

ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

Suddi Udaya

ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಾಸಭೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya
error: Content is protected !!