September 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೆಸ್ಕಾಂನಲ್ಲಿ 395 ಪವರ್‌ಮ್ಯಾನ್‌ ಗಳ ನೇಮಕಾತಿ

ಬೆಳ್ತಂಗಡಿ: ಮೆಸ್ಕಾಂ ವ್ಯಾಪ್ತಿಗೆ 395 ಹೊಸ ಪವರ್‌ಮ್ಯಾನ್‌ ಗಳನ್ನು ನೇಮಕ ಮಾಡಲಾಗಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 430 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಸದ್ಯ 395 ಮಂದಿಗೆ ನೇಮಕಾತಿ ಆದೇಶ ನೀಡಲಾಗಿದೆ. ಇನ್ನೂ 35 ಪವರ್‌ಮನ್‌ಗಳ ಕೊರತೆಯಿದ್ದು, ಹೆಚ್ಚುವರಿ ನೇಮಕಾತಿಗೆ ಸರಕಾರ ಅನುಮತಿ ನೀಡಿದೆ ಎಂದರು.

ಮೆಸ್ಕಾಂ ವ್ಯಾಪ್ತಿಯಲ್ಲಿ ಒಟ್ಟು 28.10 ಲಕ್ಷ ವಿದ್ಯುತ್ ಸಂಪರ್ಕಗಳಿವೆ. ಸುಮಾರು 97 ಸಾವಿರ ಕಿ. ಮೀ. ಕಡಿಮೆ ಒತ್ತಡದ ಹಾಗೂ 59 ಸಾವಿರ ಕಿ. ಮೀ. 11 ಕೆವಿ ಉನ್ನತ ಒತ್ತಡದ ವಿದ್ಯುತ್ ಮಾರ್ಗಗಳಿವೆ. ಮಂಗಳೂರು ನಗರದಲ್ಲಿ ಭೂಗತ ವಿದ್ಯುತ್ ಕೇಬಲ್ ವ್ಯವಸ್ಥೆ ಮತ್ತು ಲಿಂಕ್‌ಲೈನ್ ನಿರ್ಮಾಣಕ್ಕೆ ಒತ್ತು ನೀಡಲಾಗುತ್ತಿದೆ. ವಿದ್ಯುತ್ ಸುರಕ್ಷೆಗಾಗಿ ಸುಮಾರು 5,270 ದ್ವಿಮುಖ ಕಟ್ ಔಟ್‌ಗಳನ್ನು ಅಳವಡಿಸುವ ವ್ಯವಸ್ಥೆಯೂ ಜಾರಿಯಲ್ಲಿದೆ. ಹೊಸ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸಲಾಗುತ್ತಿದ್ದು, ಮೊಬೈಲ್ ಆ್ಯಪ್ ಮೂಲಕ ಗ್ರಾಹಕರು ವಿದ್ಯುತ್ ಬಳಕೆ, ದೈನಂದಿನ ಬಳಕೆಯ ಪ್ರಮಾಣ ಹಾಗೂ ಬಿಲ್ ವಿವರಗಳನ್ನು ಪರಿಶೀಲಿಸಬಹುದು ಎಂಬ ಮಾಹಿತಿ ನೀಡಿದರು.

ಈ ಪೂರ್ವ ಮುಂಗಾರು, ಅವಧಿಯಲ್ಲಿ ಗಾಳಿ ಮಳೆಯಿಂದಾಗಿ ಮೆಸ್ಕಾಂ ವ್ಯಾಪ್ತಿಯಲ್ಲಿ ಒಟ್ಟು 17,770 ವಿದ್ಯುತ್ ಕಂಬ, 496.37 ಕಿ.ಮೀ. ವಿದ್ಯುತ್ ಮಾರ್ಗ ಹಾನಿ ಯಾಗಿದ್ದು, 25.77 ಕೋ. ರೂ. ನಷ್ಟ ಉಂಟಾಗಿದೆ. ಮಳೆಗಾಲದಲ್ಲಿ ತುರ್ತು ನಿರ್ವಹಣ ಕೆಲಸ ನಿರ್ವಹಿಸಲು 489 ಮಂದಿಯ ಕಾರಪಡೆ, 62 ವಾಹನಗಳನ್ನು ಹೆಚ್ಚುವರಿಯಾಗಿ ವ್ಯವಸ್ಥೆಗೊಳಿಸಲಾಗಿದೆ. ದೂರವಾಣಿ ಕರೆಗಳ ನಿರ್ವ ಹಣೆಗೆ 23 ಮಂದಿಯ ವಿಶೇಷ ಪಡೆ ಸಜ್ಜುಗೊಳಿಸಲಾಗಿದೆ ಎಂದರು.

Related posts

“ಆಪರೇಶನ್ ಸಿಂಧೂರ” ಸರಿಯಾದ ಉತ್ತರವಾಗಿದೆ: ಸುಮಂತ್ ಕುಮಾರ್ ಜೈನ್

Suddi Udaya

ಉಜಿರೆ : ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಪಡೆಯಲು ಮಂಗಳೂರಿನಲ್ಲಿರುವ ಎಂಐಯು ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ರೋಗಿಗಳಿಗೆ ನೇರವಾಗಿ ದಾಖಲಾತಿಗೆ ಅವಕಾಶ ಮಾಡಿಕೊಡಬೇಕು ಸದನದಲ್ಲಿ :ಶಾಸಕಹರೀಶ್ ಪೂಂಜಾ

Suddi Udaya

ಮಹಾಮಂಡಲೇಶ್ವರ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಇದರ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ವರ್ತಕರ ಸಂಘ ಹಾಗೂ ಬೆಳ್ತಂಗಡಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ವತಿಯಿಂದ ಸ್ವಾತಂತ್ರ ದಿನಾಚರಣೆ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ: ರೂ.24.43 ಕೋಟಿ ವ್ಯವಹಾರ, ರೂ.30.91 ಲಕ್ಷ ನಿವ್ವಳ ಲಾಭ, ಶೇ.22 ಡಿವಿಡೆಂಡ್

Suddi Udaya
error: Content is protected !!