ಹೊಸಂಗಡಿ: ಪೆರಿಂಜೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 02 ರಂದು ನಡೆದ ವಲಯ ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕಿನ ಇಂದಿರಾಗಾಂಧಿ ವಸತಿ ಶಾಲೆ ಹೊಸಂಗಡಿ ಶಾಲೆಯ ವಿದ್ಯಾರ್ಥಿಗಳ ತಂಡವು ವಲಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದೆ.

ಈ ಗೆಲುವಿನೊಂದಿಗೆ ತಂಡವು ತಾಲೂಕು ಮಟ್ಟದ ಪಂದ್ಯಾಟಕ್ಕೆ ಅರ್ಹತೆ ಪಡೆದುಕೊಂಡಿದೆ. ಮೈದಾನದಲ್ಲಿ ನಡೆದ ರೋಮಾಂಚಕ ಅಂತಿಮ ಪಂದ್ಯದಲ್ಲಿ ವಸತಿ ಶಾಲೆಯ ಆಟಗಾರರು ಕಠಿಣ ಪೈಪೋಟಿ ನೀಡಿ, ತಂಡವನ್ನು ಸತತ ಸೆಟ್ ಗಳಿಂದ ಸೋಲಿಸಿ, ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು ಪಂದ್ಯದುದ್ದಕ್ಕೂ ಶಿಸ್ತುಬದ್ಧ ಆಟ ಹಾಗೂ ಅತ್ಯುತ್ತಮ ಪ್ರದರ್ಶನ ನೀಡಿದ ತಂಡದ ನಾಯಕ ಮೋಕ್ಷಿತ್ ಮತ್ತು ಆಟಗಾರರು ಪ್ರೇಕ್ಷಕರ ಪ್ರಶಂಸೆಗೆ ಪಾತ್ರರಾದರು.











