ಬೆಳ್ತಂಗಡಿ – ಬಂಗಾಡಿ ವಲಯ ಮಟ್ಟದ ಬಾಲಕ-ಬಾಲಕಿಯರ U-14 ವಯೋಮಾನದ ವಾಲಿಬಾಲ್ ಪಂದ್ಯಾಟವು ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಣಿ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳು ಹಾಗೂ ನೋಟರಿ ವಕೀಲರಾದ ಗಣೇಶ್ ಗೌಡ ಇವರು ವಹಿಸಿ, ವಿದ್ಯಾರ್ಥಿಗಳ ದೈಹಿಕ ಬೆಳವಣಿಗೆಗೆ ಇಂತಹ ಪಂದ್ಯಾಟಗಳು ಅವಶ್ಯಕವಾದುದು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಭಾರತೀಯ ಭೂಸೇನೆ ನಿವೃತ್ತ ವಿಕ್ರಮ್ ಜೆ. ಎನ್, ಕ್ಷೇತ್ರ ಶಿಕ್ಷಣಾಧಿಕಾರಿ ಶಿಕ್ಷಣ ಸಂಯೋಜಕರು ಶ್ರೀಮತಿ ಚೇತನಾಕ್ಷಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಉಪಾಧ್ಯಕ್ಷ ಅಮಿತಾನಂದ ಹೆಗಡೆ , ದೈಹಿಕ ಶಿಕ್ಷಣ ಶಿಕ್ಷಕ ರವಿ ಕಿಲ್ಲೂರು, ಬೆಳ್ತಂಗಡಿ – ಬಂಗಾಡಿ ವಲಯದ ಕ್ರೀಡಾ ಸಂಯೋಜಕರು, ವಾಣಿ ಆಂಗ್ಲ ಮಾಧ್ಯಮ ಶಾಲೆ ಯ ಶಿಕ್ಷಕ – ರಕ್ಷಕರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ, ವಾಣಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ವಾಣಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ., ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿಯಾದ ಶ್ರೀಮತಿ ಸುಹಾಸಿನಿ ಎ ಉಪಸ್ಥಿತರಿದ್ದರು.
ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ. ಸ್ವಾಗತಿಸಿದರು. ದೈಹಿಕ ಶಿಕ್ಷಕ ಹರೀಶ್ ವಂದನಾರ್ಪಣೆಯನ್ನುಗೈದರು. ಶಿಕ್ಷಕಿ ಶ್ರೀಮತಿ ವಂದನಾ ಕಾರ್ಯಕ್ರಮವನ್ನು ನಿರೂಪಿಸಿದರು. ಎಲ್ಲಾ ಶಿಕ್ಷಕ – ಶಿಕ್ಷಕೇತರರು ಭಾಗವಹಿಸಿದರು.












