ಲಾಯಿಲ:ಹಳೆ ವಿದ್ಯಾರ್ಥಿ ಸಂಘ ಸ. ಉ. ಹಿ. ಪ್ರಾ. ಶಾಲೆ ಕರ್ನೋಡಿ ಲಾಯಿಲ ಇದರ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ “ಗುರು ವಂದನಾ” ಕಾರ್ಯಕ್ರಮವು ಸೆ 4 ರಂದು ಸಂಘದ ಅಧ್ಯಕ್ಷರಾದ ಶ್ರೀ ಸುರೇಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು

ಶಾಲೆಯಲ್ಲಿ ಸುದೀರ್ಘ 29 ವರ್ಷಗಳ ಕಾಲ ಸೇವೆ ಸಲ್ಲಿಸಿದ ಶ್ರೀಮತಿ ಲಲಿತಾ ಇವರನ್ನು ಹಳೆ ವಿದ್ಯಾರ್ಥಿ ಸಂಘದ ಪರವಾಗಿ ಗೌರವಿಸಲಾಯಿತು ವೇದಿಕೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರಾದ ಶ್ರೀ B K ಧನಂಜಯ ರಾವ್, ಸ್ಥಾಪಕಾಧ್ಯಕ್ಷರಾದ ಶ್ರೀ ಸಂತೋಷ್ b. l ರೋಟರಿ ಕ್ಲಬ್ ಮಹಿಳಾ ವಿಭಾಗದ ಅಧ್ಯಕ್ಷರಾದ ಶ್ರೀಮತಿ ರಾಜಶ್ರೀ ರಾವ್, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಗಣೇಶ್ ಆರ್, ಕೋಶಾಧಿಕಾರಿ ಸದಾಶಿವ ಸಮಗಾರ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಸೌಮ್ಯ, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಜಗನ್ನಾಥ್ ಎಂ ವೇದಿಕೆಯಲ್ಲಿ ಉಪಸ್ಥಿತರಿದ್ದರು ಹಳೆ ವಿದ್ಯಾರ್ಥಿ ಸಂಘದ ಕ್ರೀಡಾ ಕಾರ್ಯದರ್ಶಿ ಶ್ರೀಮತಿ ದಿವ್ಯ. ಬಿ ಸ್ವಾಗತಿಸಿ ಕಾರ್ಯದರ್ಶಿ ಗಣೇಶ್. ಆರ್ ಧನ್ಯವಾದಗೈದರು ಸಂಘದ ಉಪಾಧ್ಯಕ್ಷೆ ಶ್ರೀಮತಿ ಸ್ವಾತಿ ಅಭಿನಂದನ ಪತ್ರವನ್ನು ವಾಚಿಸಿದರು ಸಹ ಶಿಕ್ಷಕರಾದ ಕೃಷ್ಣ ಕುಮಾರ್ ಕಾರ್ಯಕ್ರಮ ನಿರೂಪಿಸಿದರು

ಈ ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, S. D. M. C ಸಮಿತಿ ಸದಸ್ಯರು, ಸಹ ಶಿಕ್ಷಕರು, ವಿದ್ಯಾರ್ಥಿಗಳು,ಹಳೆ ವಿದ್ಯಾರ್ಥಿಗಳು, ಪೋಷಕರು ಮತ್ತು ವಿದ್ಯಾಭಿಮಾನಿಗಳು ಭಾಗವಹಿಸಿದರು













