September 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಪ್ರಾಧ್ಯಾಪಕ ಮಹಮ್ಮದ್ ಇಕ್ಬಾಲ್ ರವರಿಗೆ ಡಾಕ್ಟರೇಟ್

ಬೆಳ್ತಂಗಡಿ; ಉಜಿರೆ ಗ್ರಾಮದ ಮಾಚಾರು ನಿವಾಸಿ, ಪ್ರಸ್ತುತ ಡಾ. ಪಿ. ದಯಾನಂದ ಪೈ ಸತೀಶ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಮಂಗಳೂರು ಇಲ್ಲಿ ಮನೋವಿಜ್ಞಾನ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ ಮಹಮ್ಮದ್ ಇಕ್ಬಾಲ್ ಇವರಿಗೆ ತಮಿಳುನಾಡಿನ ಪೆರಿಯಾರ್ ವಿಶ್ವವಿದ್ಯಾಲಯ ಸೇಲಂ ಇಲ್ಲಿಂದ ಡಾಕ್ಟರೇಟ್ ಪದವಿ ಲಭಿಸಿದೆ.

ಮಾಚಾರು ಬಂಡಸಾಲೆ ನಿವಾಸಿ ದಿ. ಅಬ್ದುಲ್ ರಝಾಕ್ ಮತ್ತು ನಫೀಸ ದಂಪತಿಯ ಪುತ್ರರಾಗಿರುವ ಅವರು ಡಾ. ಜೆ ವೆಂಕಟಾಚಲಂ ಅವರ ಮಾರ್ಗದರ್ಶನದಲ್ಲಿ “ಎಫೆಕ್ಟ್ ಆಫ್ ಜೆಪಿಎಂ‌ಆರ್ ಇಂಟರ್ವೆನ್ಷನ್ ಇನ್ ರೆಡ್ಯೂಸಿಂಗ್ ದ ಟೆಸ್ಟ್ ಆಂಗ್ಸೈಟಿ ಅಮಂಗ್ ಕಾಲೇಜ್ ಸ್ಟೂಡೆಂಟ್ಸ್” ಎಂಬ ವಿಷಯದಲ್ಲಿ ಮಂಡಿಸಿದ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಲಭಿಸಿದೆ.

ಉಜಿರೆ ಎಸ್ ಡಿ ಎಮ್ ಕಾಲೇಜಿನಲ್ಲಿ ಮನೋವಿಜ್ಞಾನ ವಿಭಾಗದಲ್ಲಿ ಸ್ನಾತ್ತಕೋತ್ತರ ಪದವಿ ಪಡೆದಿರುವ ಮಹಮ್ಮದ್ ಇಕ್ಬಾಲ್ ಅವರು ಈ‌ ಹಿಂದೆಯೇ ತಮಿಳುನಾಡಿನ ಅಣ್ಣಾಮಲೈ ವಿಶ್ವವಿದ್ಯಾಲಯದಿಂದ ಎಂಫಿಲ್ ಪದವಿ ಪಡೆದಿದ್ದರು.
ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಮನೋವಿಜ್ಞಾನ ಉಪನ್ಯಾಸಕರಾಗಿ, ಗೇರುಕಟ್ಟೆ ಮನ್ಶರ್ ಅಕಾಡಮಿಯ ಪ್ರಾಂಶುಪಾಲರಾಗಿ, ಕುಂದಾಪುರದ ಭಂಡಾರ್ಕರ್ ಕಾಲೇಜು ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ತೀರ್ಥಹಳ್ಳಿ ಇಲ್ಲಿ ಪ್ರಾಧ್ಯಾಪಕರಾಗಿ ವೃತ್ತಿ ಜೀವನ ನಡೆಸಿ ಪ್ರಸ್ತುತ ಮಂಗಳೂರಿನಲ್ಲಿ ವೃತ್ತಿ ನಿರತರಾಗಿದ್ದಾರೆ. ಉತ್ತಮ ಸಂಘಟಕ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿರುವ ಅವರು ಕಾಜೂರು ಶಿಕ್ಷಣ ಸಂಸ್ಥೆಗಳ ಅಕಾಡಮಿಕ್ ಸಲಹೆಗಾರರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

Related posts

ನಾವೂರು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನೋತ್ಸವ ಮತ್ತು ಶಿಕ್ಷಕರ ದಿನಾಚರಣೆ: 23 ಮಂದಿ ನಿವೃತ್ತ ಶಿಕ್ಷಕರಿಗೆ ಸನ್ಮಾನ; ದತ್ತಿನಿಧಿ ಸಮರ್ಪಣೆ

Suddi Udaya

ಕರಾಯ : ಆಟೋರಿಕ್ಷಾಕ್ಕೆ ಟಿಪ್ಪರ್‌ ಲಾರಿ ಡಿಕ್ಕಿ: ಪುತ್ತೂರು ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದ ಮೂಲಕ ವಾಟರ್ ಬೆಡ್ ವಿತರಣೆ

Suddi Udaya

ಅನಾರು: ಕೆಳಗಿನ ಕೊಪ್ಪ ನಿವಾಸಿ ಈರಮ್ಮ ನಿಧನ

Suddi Udaya

ಸುಲ್ಕೇರಿ: 43ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya
error: Content is protected !!