September 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ : ಪುದುವೆಟ್ಟು ಬಳಿ ಕಾಡಾನೆ ಪ್ರತ್ಯಕ್ಷ

ಬೆಳ್ತಂಗಡಿ: ಉಜಿರೆ-ಪೆರಿಯಶಾಂತಿ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ.

ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ ಕಾಣಿಸಿಕೊಂಡಿದೆ. ರಸ್ತೆಯ ಸಮೀಪವೇ ಕಾಡಾನೆ ಸಂಚರಿಸುತ್ತಿರುವುದನ್ನು ಗಮನಿಸಿದ ವಾಹನ ಸವಾರರು ಕೆಲಕಾಲ ಆತಂಕಗೊಂಡಿದ್ದಾರೆ. ಕಾಡಾನೆ ರಸ್ತೆಯ ಬದಿಯಲ್ಲಿ ಕಾಣಿಸಿಕೊಂಡಿರುವ ದೃಶ್ಯವನ್ನು ಕೆಲವರು ಮೊಬೈಲ್‌ ನಲ್ಲಿ ಸೆರೆಹಿಡಿದಿದ್ದಾರೆ.
ಈ ಭಾಗದಲ್ಲಿ ಕಾಡಾನೆಗಳ ಸಂಚಾರ ಆಗಾಗ ಕಂಡುಬರುತ್ತಿದ್ದು, ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಹಾಗೂ ಸ್ಥಳೀಯರು ಎಚ್ಚರಿಕೆಯಿಂದ ಇರುವ ಅಗತ್ಯವಿದೆ.

Related posts

ಜು.19: ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ: ಹಿಂದೂಗಳ ಹತ್ಯೆಗೆ ಖಂಡನೆ, ಹಿಂದೂಗಳ ರಕ್ಷಣೆಗೆ ಆಗ್ರಹ

Suddi Udaya

ನೇಣುಬಿಗಿದು ಯುವಕ ಆತ್ಮಹತ್ಯೆಗೆ ಶರಣು: ವಿಷಯ ತಿಳಿದು ತಂದೆ ಕೂಡ ಆತ್ಮಹತ್ಯೆ ಪ್ರಯತ್ನ

Suddi Udaya

ಸುದ್ದಿ ಉದಯ ಫಲಶ್ರುತಿ: ನಿಡ್ಲೆ ಕಂರ್ಬಿತ್ತಿಲು ಎಂಬಲ್ಲಿ ಅಪಾಯದಂಚಿನಲ್ಲಿದ್ದ ಬೃಹತ್ ಗಾತ್ರದ ಮರ ತೆರವು

Suddi Udaya

ಕನ್ಯಾಡಿ ಸರ್ಕಾರಿ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಅಕ್ರಮ ಮರಳು ದಾಸ್ತಾನು ಅಡ್ಡೆ ಪತ್ತೆಹಚ್ಚಿದ ವೇಣೂರು ಪೊಲೀಸರು

Suddi Udaya
error: Content is protected !!