ಬೆಳ್ತಂಗಡಿ: ಬಿಪಿಎಲ್ ಕಾರ್ಡ್ ದಾರರಿಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ – ಕೆವೈಸಿ ಆರಂಭಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸೂಚನೆ ನೀಡಿದೆ. ಹೀಗಾಗಿ ಕೆಲವೆಡೆ ಈ ಪ್ರಕ್ರಿಯೆ ಆರಂಭವಾಗಿದೆ. ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದ ಫಲಾನುಭವಿಗಳು ಬಯೋಮೆಟ್ರಿಕ್ಸ್, ಆಧಾರ್ ಸಂಖ್ಯೆಯೊಂದಿಗೆ ಇ-ಕೆವೈಸಿ ಮಾಡಿಸಬೇಕು.
ಕರ್ನಾಟಕದಲ್ಲಿ ಪಡಿತರ ಚೀಟಿ ಹೊಂದಿರುವ ಎಲ್ಲಾ ಫಲಾನುಭವಿಗಳು ಇಲಾಖೆ ತಿಳಿಸಿದ ನಿಗದಿತ ಸಮಯದೊಳಗೆ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಆಹಾರ ಇಲಾಖೆ ತಿಳಿಸಿದೆ. ವಿಶೇಷವಾಗಿ ಈ ಹಿಂದೆ ಇ-ಕೆವೈಸಿ ದೃಢೀಕರಿಸಿ 5 ವರ್ಷ ಪೂರೈಸಿದ ಪಡಿತರದಾರರು ಇದನ್ನು ಕಡ್ಡಾಯವಾಗಿ ನವೀಕರಿಸಬೇಕಾಗಿದೆ. ನಿಗದಿತ ಅವಧಿಯೊಳಗೆ ಇ-ಕೆವೈಸಿ ಮಾಡಿಸದಿದ್ದರೆ ಅಂತಹ ಸದಸ್ಯರ ಹೆಸರನ್ನು ಪಡಿತರ ಪಟ್ಟಿಯಿಂದ ತಾತ್ಕಾಲಿಕವಾಗಿ ತೆಗೆದುಹಾಕಲಾಗುತ್ತದೆ ಮತ್ತು ಪಡಿತರ ವಿತರಣೆಯನ್ನು ಸ್ಥಗಿತಗೊಳಿಸಲಾಗುತ್ತದೆ.
ಇ-ಕೆವೈಸಿ ಮಾಡುವುದು ಹೇಗೆ?
ನ್ಯಾಯಬೆಲೆ ಅಂಗಡಿಯ ಪಡಿತರ ಚೀಟಿಯಲ್ಲಿ ಹೆಸರಿರುವ ಪ್ರತಿಯೊಬ್ಬ ಸದಸ್ಯರು ತಮ್ಮ ಆಧಾರ್ ಕಾರ್ಡ್ನೊಂದಿಗೆ ಸ್ಥಳೀಯ ನ್ಯಾಯಬೆಲೆ (ರೇಷನ್) ಅಂಗಡಿಗೆ ಭೇಟಿ ನೀಡಿ, ಬಯೋಮೆಟ್ರಿಕ್ (ಬೆರಳಚ್ಚು) ನೀಡುವ ಮೂಲಕ ಇ-ಕೆವೈಸಿ ಪೂರ್ಣಗೊಳಿಸಬಹುದು. ಈಗಾಗಲೇ ಬೆಳ್ತಂಗಡಿ ತಾಲ್ಲೂಕಿನ ಎಲ್ಲಾ ನ್ಯಾಯಬೆಲೆ ಅಂಗಡಿಗಳ BPL ಹಾಗೂ ಅಂತ್ಯೋದಯ ಪಡಿತರ ಚೀಟಿಗಳ EKYC ಆಗಬೇಕಾದವರ ಸದಸ್ಯರ ಪಟ್ಟಿ ನೀಡಲಾಗಿದೆ.
ಈ ಪಟ್ಟಿಯಲ್ಲಿ ಇರುವವರು 10 ನೇ ತಾರೀಕಿನ ಒಳಗಾಗಿ ತಮ್ಮ ಪಡಿತರ ಚೀಟಿ, ಆಧಾರ್ ಕಾರ್ಡ್, ಆಧಾರ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ, ಜಾತಿ ಪ್ರಮಾಣ ಪತ್ರ(ಇದ್ದಲ್ಲಿ ಮಾತ್ರ), ಗ್ಯಾಸ್ ಪುಸ್ತಕದೊಂದಿಗೆ ಕಡ್ಡಾಯವಾಗಿ ನಿಮ್ಮ ನ್ಯಾಯಬೆಲೆ ಅಂಗಡಿಗೆ ತೆರಳಿ EKYC ಮಾಡಿಕೊಳ್ಳಬೇಕು.
ಈ ಕೆಳಗಿನ ಲಿಂಕ್ ಬಳಸಿ ಪಟ್ಟಿ ನೋಡಬಹುದು
https://drive.google.com/file/d/1I7KG-Jv657NxjIQwhsMMFP_dIlawIMBJ/view?usp=drivesdk












