September 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ತಾಲೂಕಿನ ಮೂವರು ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಬೆಳ್ತಂಗಡಿ: ಸೆಪ್ಟೆಂಬರ್ 5 ರಂದು ನಡೆಯುವ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಅತ್ಯುತ್ತಮ ಸೇವೆ ಸಲ್ಲಿಸಿದ ಶಿಕ್ಷಕರಿಗೆ ದ.ಕ. ಜಿಲ್ಲಾ ಮಟ್ಟದಲ್ಲಿ ಕೊಡ ಮಾಡುವ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಮೂರು ಮಂದಿ ಶಿಕ್ಷಕರು ಆಯ್ಕೆಯಾಗಿದ್ದಾರೆ.

ಇಳಂತಿಲ ಗ್ರಾಮದ ಅಂಡೆತಡ್ಕ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕೃಷ್ಣಪ್ಪ ಪೂಜಾರಿ, ಮುಂಡ್ರುಪ್ಪಾಡಿ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಚಿತ್ರ ಪ್ರಭಾ, ವೇಣೂರು ಸ.ಪ.ಪೂ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಹಶಿಕ್ಷಕ ರವೀಂದ್ರ ಕೆ. ಅವರಿಗೆ 2026_27 ನೇ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಜಿಲ್ಲಾ ಮಟ್ಟದಲ್ಲಿ ನಡೆಯುವ ಶಿಕ್ಷಕರ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಈ ಬಾರಿ ಮಂಗಳೂರಿನಲ್ಲಿ ಸೆ.5ರಂದು ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ನಡೆಯಲಿದೆ, ಬೆಳ್ತಂಗಡಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಸೆ.5ರಂದು ಸಂತೆಕಟ್ಟೆ ಬಳಿಯಿರುವ ಎಸ್ ಡಿಎಂ ಕಲಾಭವನದಲ್ಲಿ ನಡೆಯಲಿದೆ.

Related posts

ಮಚ್ಚಿನ ಪೈಯೊಟ್ಟುನಲ್ಲಿ ಜೋಪಡಿಯಲ್ಲಿ ಬಡ ಕುಟುಂಬ: ಸೋರುವ ಸೂರಿನಡಿ ತಾಯಿ, ಮಗಳ ಸಂಕಷ್ಟದ ಜೀವನ

Suddi Udaya

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಸರ್ವಾರ್ಥ್ ಎಸ್. ಜೈನ್‌ ವೇಣೂರು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ

Suddi Udaya

ನಾರಾವಿ: ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನಲ್ಲಿ ವನಮಹೋತ್ಸವ

Suddi Udaya

ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕನ್ನಡಿಕಟ್ಟೆ ಮಸೀದಿಯಲ್ಲಿ 2 ಜೋಡಿಗಳ ಸರಳ ವಿವಾಹ

Suddi Udaya

ಸಾರಿಗೆ ಬಸ್‌ನಲ್ಲಿ ಹೆಚ್ಚಿದ ಜನಸಂದಣಿ; ವಿದ್ಯಾರ್ಥಿಗಳ, ಉದ್ಯೋಗಿಗಳ ಪರದಾಟ; ಹೆಚ್ಚುವರಿ ಬಸ್‌ಗೆ ಪ್ರಯಾಣಿಕರ ಆಗ್ರಹ

Suddi Udaya
error: Content is protected !!