ಧರ್ಮಸ್ಥಳ : ದಕ್ಷಿಣದ ಅಯೋಧ್ಯೆ ಎಂಬ ಖ್ಯಾತಿಯನ್ನು ಹೊಂದಿರುವ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 18ನೇ ವರ್ಧಂತಿ ಸೆ.3ರಂದು ಬೈಂದೂರು ಗೋಳಿಹೊಳೆ ಶ್ರೀ ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ನಡೆಯುತ್ತಿರುವ ಶ್ರೀಗಳ ಚಾತುರ್ಮಸ್ಯ ವ್ರತಾಚರಣೆಯ ಸಂದರ್ಭದಲ್ಲಿ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಶ್ರೀಗಳ ಪಾದುಕ ಪೂಜೆ, ಭಜನಾ ಕಾರ್ಯಕ್ರಮ ನಡೆಯಿತು. ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ಸ್ವಾಮೀಜಿ ಆಶೀರ್ವಚನ ನೀಡಿದರು. ನಾಗ ಸಾಧು ಕೇಶವ ಮಹಾರಾಜ್ ಉಪಸ್ಥಿತರಿದ್ದರು.



ಕಾರ್ಯಕ್ರಮದಲ್ಲಿ ದ. ಕ. ಸಂಸದ ಬ್ರಿಜೇಶ್ ಚೌಟ, ಉಡುಪಿ ಮಾಜಿ ಶಾಸಕ ರಘುಪತಿ ಭಟ್, ಮಂಗಳೂರು ಮೆಸ್ಕಾಂ ಅಧ್ಯಕ್ಷ ಗುರುದೇವ ಮಠದ ಟ್ರಷ್ಟಿ ಕೆ. ಹರೀಶ್ ಕುಮಾರ್, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಮಂಗಳೂರು ವೆನ್ಲಾಕ್ ಆಸ್ಪತ್ರೆಯ ವೈದ್ಯ ಡಾ. ಸದಾನಂದ ಪೂಜಾರಿ, ಮಂಗಳೂರು ಮಾಜಿ ಕಾರ್ಪೋರೇಟರ್ ಕಿರಣ್, ಬಿಜೆಪಿ ಪ್ರಭಾರಿ ಜಯಂತ ಕೋಟ್ಯಾನ್, ಬೈಂದೂರು ಶಾಸಕ ಚಾತುರ್ಮಸ್ಯ ಸಮಿತಿ ಅಧ್ಯಕ್ಷ ಗುರುರಾಜ ಗಂಟಿಹೊಳೆ, ಟ್ರಷ್ಟಿ ತುಕಾರಾಮ ಸಾಲಿಯಾನ್, ಬೇಬಿ ಕುಂದರ್, ಭುವನೇಶ್ ಪಚ್ಚಿನಡ್ಕ, ಹೆಚ್. ಆರ್. ನಾಯ್ಕ, ವಾಮನ ನಾಯ್ಕ, ಶ್ರೀಧರ ನಾಯ್ಕ, ಅನಿತಾ ಆರ್ಕೆ, ಓಬು ಪೂಜಾರಿ, ಇನ್ನಿತರ ಗಣ್ಯರು, ಟ್ರಷ್ಟಿಗಳು ಶಿಷ್ಯ ವೃಂದದವರು, ಶ್ರೀ ರಾಮ ಕ್ಷೇತ್ರ ಸಮಿತಿ ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.












