September 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ “ಸಾಮೂಹಿಕ ತುಳಸಿ ನಾಮಾರ್ಚನೆ”

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಶ್ರೀಕೃಷ್ಣ ಜನ್ಮಾಷ್ಟಮಿಯ ಆಚರಣೆಯು “ಸಾಮೂಹಿಕ ವಿಷ್ಣು ಸಹಸ್ರನಾಮಾವಳಿ ಪಠಣದ ಜೊತೆಯಲ್ಲಿ ತುಳಸಿ ನಾಮಾರ್ಚನೆಯ” ಮೂಲಕ ಆರಂಭಗೊಂಡಿತು.

ನೂರಾರು ಭಕ್ತರು ಕಾರ್ಯಕ್ರಮದಲ್ಲಿ ಜಾತಿ ಭೇದ ಮರೆತು ಭಾಗವಹಿಸಿ ಪಾವನರಾದರು. ಈ ಸಂದರ್ಭದಲ್ಲಿ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ (ರಿ) ಇದರ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು, ಸದಸ್ಯರು ಹಾಗೂ ಭಕ್ತರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಸಹಸ್ರನಾಮಾವಳಿ ಪಠಣವನ್ನು ಪ್ರಧಾನ ಅರ್ಚಕರಾದ ದಿನೇಶ ಭಟ್ಟ ನೆರವೇರಿಸಿ ಕೊಟ್ಟರು.

ಕಳೆದ ನಾಲ್ಕು ದಶಕಗಳಿಂದ ನಾವೂರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯು ಅತ್ಯಂತ ವಿಜೃಂಭಣೆಯಿಂದ ನಡೆಯುತ್ತಿದ್ದು, ಶ್ರೀ ಗೋಪಾಲಕೃಷ್ಣನ ಪ್ರತಿಷ್ಠಾಪನೆಯಾದ ನಂತರ ದೇವಸ್ಥಾನದಲ್ಲಿ ಕಾರ್ಯಕ್ರಮವು ಗ್ರಾಮದ ಹಾಗೂ ಪರಿಸರದ ಅನೇಕ ಭಕ್ತರ ಪಾಲ್ಗೊಳ್ಳುವಿಕೆಯ ಮೂಲಕ ಅತ್ಯಂತ ವಿಜೃಂಭಣೆಯಿಂದ ನಡೆದು ಬರುತ್ತಿದ್ದು, ಈ ವರ್ಷವೂ ಬೆಳಗಿನ ಪೂಜಾ ಕಾರ್ಯಕ್ರಮಗಳು ವಿಧ್ಯುಕ್ತವಾಗಿ ನಡೆದಿರುತ್ತವೆ. ಮಧ್ಯಾಹ್ನ ಮಹಾಪೂಜೆ, ಸಾಯಂಕಾಲ ರಂಗಪೂಜೆಯೂ ನಡೆಯಲಿದೆ. ಇಡೀ ದಿನ ಮಕ್ಕಳಿಗೆ, ಯುವಕರಿಗೆ, ಯುವತಿಯರಿಗೆ ಅನೇಕ ಕಾರ್ಯಕ್ರಮಗಳು, ಅನೇಕ ಸ್ಪರ್ಧೆಗಳು ಆಯೋಜನೆಗೊಳ್ಳಲಿವೆ.

Related posts

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಎ.30: ಲಾಯಿಲ 48ನೇ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬಂಗೇರ ಬ್ರಿಗೇಡ್ ಮಾಲಾಡಿ ಪಂಚಾಯತ್ ವ್ಯಾಪ್ತಿಯ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಜೆರಾಲ್ಡ್ ಮೋರಸ್, ಪ್ರ. ಕಾರ್ಯದರ್ಶಿಯಾಗಿ ಪ್ರಶಾಂತ್ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕಿನ 70 ಸಾವಿರ ಅಕ್ರಮ ಸಕ್ರಮ ಭೂ ಮಂಜೂರಾತಿ ಅರ್ಜಿದಾರರ ಬದುಕು ಬೀದಿಗೆ: 94ಸಿ ಮನೆ ನಿವೇಶನ ಅರ್ಜಿ ತಾಲೂಕು ಕಛೇರಿಯಲ್ಲಿ ನಾಪತ್ತೆ: ಜೂ.17 ರಿಂದ ಕಂದಾಯ ಸಚಿವ ಕೃಷ್ಣ ಬೈರೆ ಗೌಡರಿಗೆ ಪತ್ರ ಚಳುವಳಿ: ಜೂನ್ 26 ರಂದು ಕೃಷಿಕರಿಂದ ಹಕ್ಕೊತ್ತಾಯ ಸಭೆ

Suddi Udaya

ರಾಜ್ಯಮಟ್ಟದ ನೃತ್ಯ ಸ್ಪರ್ಧೆ : ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ಪ್ರಥಮ ಸ್ಥಾನ

Suddi Udaya

ಬಂಟ್ವಾಳ: ಯುವತಿ ಹತ್ಯೆ ಪ್ರಕರಣ : ಆರೋಪಿ ಬಂಧನ

Suddi Udaya
error: Content is protected !!