September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಉಜಿರೆ: ಸೆ.5 ರಂದು ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ)ಯಲ್ಲಿ ರಾಷ್ಟ್ರೀಯ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಭಾರತದ ಮಾಜಿ ರಾಷ್ಟ್ರಪತಿ ಹಾಗೂ ಖ್ಯಾತ ಶಿಕ್ಷಣತಜ್ಞ ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಶಿಕ್ಷಕ ವೃಂದದವರು ಪುಷ್ಪಾರ್ಚನೆ ಸಲ್ಲಿಸಿದರು.

ಶಿಕ್ಷಕರಿಗಾಗಿ ವಿಶೇಷವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಮನರಂಜನಾ ಆಟಗಳನ್ನು ಆಯೋಜಿಸಿ ಶಿಕ್ಷಕರನ್ನು ಉತ್ಸಾಹದಿಂದ ಭಾಗವಹಿಸುವಂತೆ ಮಾಡಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಆಕರ್ಷಕ ನೃತ್ಯ ಹಾಗೂ ಸಂಗೀತ ಕಾರ್ಯಕ್ರಮಗಳು ಜರುಗಿ, ಶಿಕ್ಷಕರಿಗೆ ಸಂಭ್ರಮದ ಕ್ಷಣಗಳನ್ನು ನೀಡಿದವು.

ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ.ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿನಿಯರಾದ ವಂಶಿ ಹಾಗೂ ಮೆಲ್ರಿನ್ ಕಾರ್ಯಕ್ರಮವನ್ನು ನಿರೂಪಿಸಿ, ವಿದ್ಯಾರ್ಥಿ ನಿನಾದ್ ಸ್ವಾಗತಿಸಿ, ವಿದ್ಯಾರ್ಥಿ ಸಿದ್ಧಾಂತ್ ವಂದಿಸಿದರು.

ಶಿಕ್ಷಕರಿಗೆ ಗೌರವ ಹಾಗೂ ಕೃತಜ್ಞತೆ ಸಲ್ಲಿಸುವ ಮೂಲಕ ಆಚರಿಸಲಾದ ಈ ಕಾರ್ಯಕ್ರಮವು ವಿದ್ಯಾರ್ಥಿಗಳು ಮತ್ತು ಶಿಕ್ಷಕರ ನಡುವೆ ಆತ್ಮೀಯತೆಯನ್ನು ಹೆಚ್ಚಿಸಿತು.

Related posts

ಬಂದಾರು: ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರುನಲ್ಲಿ ಒಂಟಿ ಸಲಗ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ ಗ್ರಾ.ಪಂ. ಉಪಚುನಾವಣೆ ಪೂರ್ವತಯಾರಿ ಸಭೆ

Suddi Udaya

ಎಸ್.ಐ‌.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಕಚೇರಿಗೆ ಆಗಮನ

Suddi Udaya

ಬೆಳ್ತಂಗಡಿ: ರೆಂಕೆದಗುತ್ತು ನಿವಾಸಿ ಪಟ್ಟಣ ಪಂಚಾಯಿತ್ ನಾಮನಿರ್ದೇಶನ ಸದಸ್ಯರ ಅಬ್ದುಲ್ ಬಶೀರ್ ಆತ್ಮಹತ್ಯೆ

Suddi Udaya

ಶಿಶಿಲ: ಪಡ್ಪು ನಿವಾಸಿ ಧರ್ಣಪ್ಪ ಗೌಡ ನಿಧನ

Suddi Udaya

ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ವಿಶೇಷ ಕೌಶಲ್ಯ ತರಬೇತಿ “ಐಸ್ ಬ್ರೇಕಿಂಗ್ ಸೆಷನ್” ಕಾರ್ಯಾಗಾರ

Suddi Udaya
error: Content is protected !!