September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ. ಮಂ. ಅ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನ ಮತ್ತು ವಿದ್ಯಾರ್ಥಿಗಳಿಗೆ ಶಾಲಾ ಸೌಲಭ್ಯಗಳ ವಿತರಣೆ


ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಮತ್ತು ವಿದ್ಯಾರ್ಥಿಗಳಿಗೆ ಶಾಲಾ ಸೌಲಭ್ಯಗಳ ವಿತರಣಾ ಕಾರ್ಯಕ್ರಮ ಆ.29 ರಂದು ಜರಗಿತು.


ಕಾರ್ಯಕ್ರಮದಲ್ಲಿ ಹಾಕಿ ಆಟಗಾರ ಮೇಜರ್ ಧ್ಯಾನ್ ಚಂದ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಪ್ರೊ ಕಬಡ್ಡಿ ಆಟಗಾರ ಗಗನ್ ಗೌಡ ಮಾತನಾಡಿ , ಕ್ರೀಡೆ ನಮ್ಮಲ್ಲಿ ಶಿಸ್ತು, ಸಮಯ ಪಾಲನೆ, ಆತ್ಮವಿಶ್ವಾಸ, ಸಹಕಾರ ಮತ್ತು ಸೋಲನ್ನು ಸ್ವೀಕರಿಸುವ ಮನೋಭಾವವನ್ನು ಬೆಳೆಸುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಮಾತನಾಡಿ ಕ್ರೀಡೆ ಮೂಲಕ ಆರೋಗ್ಯವಂತ ದೇಹ, ಚುರುಕಾದ ಮನಸ್ಸು, ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬಹುದು ಆರೋಗ್ಯಕರ ಜೀವನಕ್ಕೆ ಕ್ರೀಡೆ ಉತ್ತಮ ಮಾರ್ಗ ಎಂದು ತಿಳಿಸಿದರು.

ವಿದ್ಯಾರ್ಥಿನಿ ಸುಷ್ಮಾ ದಿನ ವಿಶೇಷತೆಯ ಕುರಿತು ಮಾತನಾಡಿದರು. ಉಷಾ ಏನ್ ಉಡುಪ ಸ್ಮರಣಾರ್ಥ ದತ್ತಿ ನಿಧಿಯಿಂದ ವಿದ್ಯಾರ್ಥಿಗಳಿಗೆ ಪಾದರಕ್ಷೆಯನ್ನು ಗಿರೀಶ್ ಭಾರಿತ್ತಾಯ ಪಾರಳ ವಿತರಿಸಿದರು.
ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಹಕಾರದಿಂದ ನೀಡಿದ ವಿದ್ಯಾರ್ಥಿಗಳ ಶಾಲಾ ಶುಲ್ಕ ಮತ್ತು ಐಡಿ ಕಾರ್ಡ್ ನ್ನು ಹಿರಿಯ ವಿದ್ಯಾರ್ಥಿಗಳಾದ ಗಣೇಶ್ ಕನಿಕ್ಕಿಲ ಮತ್ತು ರಾಧಾಕೃಷ್ಣ ಮಾಯ ವಿತರಿಸಿದರು.

ವೇದಿಕೆಯಲ್ಲಿ ರಾಷ್ಟ್ರೀಯ ಕ್ರೀಡಾಪಟು ನಿಶಾ ಬನಂದೂರು, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಪ್ರಮೀಳಾ, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಶಿಕ್ಷಕರಾದ ಕೃಷ್ಣಾನಂದ ರಾವ್ ಸ್ವಾಗತಿಸಿ, ಕಿರಣ್ ವಂದಿಸಿದರು. ಸುಮನ್ ಯು. ಎಸ್ ಕಾರ್ಯಕ್ರಮ ನಿರೂಪಿಸಿದರು.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya

ಕಳೆಂಜ ಸರ್ವೆ ನಂ. 309ರ ಅರಣ್ಯ ಇಲಾಖೆಯ ಜಂಟಿ ಸರ್ವೇಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಅಂಡಿಂಜೆ: ಯುವಕ ಮಂಡಲದಿಂದ ಮೊಸರು ಕುಡಿಕೆ ಉತ್ಸವ, ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಪುಂಜಾಲಕಟ್ಟೆ ಬಿ. ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್ಸ್‌ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್

Suddi Udaya

ಖಾಸಗಿ ವಿದ್ಯುತ್ ಉತ್ಪಾದನಾ ಕಂಪೆನಿಯ ವಯರ್ ನಲ್ಲಿ‌ ರಾತ್ರಿ ಕಾಣಿಸಿಕೊಂಡ ಬೆಂಕಿ: ತಪ್ಪಿದ ಭಾರೀ ಅನಾಹುತ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಉದ್ಯಮಿ ವಾಸುದೇವ ಗೌಡ ರಿಗೆ ಸನ್ಮಾನ

Suddi Udaya
error: Content is protected !!