September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಬೆಳ್ತಂಗಡಿ : ಕಲ್ಲೇರಿ ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ 2025-26 ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಅಧ್ಯಕ್ಷತೆಯಲ್ಲಿ ಕಲ್ಲೇರಿ ಬಾಪೂಜಿ ಕೇಂದ್ರದಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಮಾತನಾಡಿ,  ಸಂಘವು ಹಂತ ಹಂತವಾಗಿ ಬೆಳೆದು ಕಳೆದ ವರ್ಷ ನೂತನ ಕಟ್ಟಡ ಲೋಕಾರ್ಪಣೆಗೊಂಡಿದೆ. ಸಿಬ್ಬಂದಿಗಳ ನಗಮೊಗದ ಸೇವೆ, ಗ್ರಾಹಕರ ಸಹಕಾರದಿಂದ ಬ್ಯಾಂಕ್ ಪ್ರಗತಿ ಹಾದಿಯಲ್ಲಿ ಮುಂದುವರಿಯುತ್ತಿದ್ದು, ವಾರ್ಷಿಕವಾಗಿ 70 ಕೋಟಿ ರೂ. ವ್ಯವಹಾರ ನಡೆಸಿ, 33 ಲಕ್ಷ ರೂ. ಲಾಭ ಗಳಿಸಿದ್ದು ಸದಸ್ಯರಿಗೆ 8% ಡಿವಿಡೆಂಟ್ ಘೋಷಿಸಲಾಗಿದೆ, ಗೇರುಕಟ್ಟೆಯಲ್ಲಿ ನೂತನ ಶಾಖೆ ತೆರೆಯುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಹೇಳಿದರು.

ಕಂಬಳ ಕ್ಷೇತ್ರದ ಸಾಧಕರಾದ ದಿಲೀಪ್ ಪಂಜಿಕುಡೇಲು ಮತ್ತು ಚರಣ್, ಶೇಕ್ಷಣಿಕ ಕ್ಷೇತ್ರದ ಸಾಧಕರಾದ ತೃಪ್ತಿ ಕೆ, ಸಾತ್ವಿಕ್ ಪಿ. ಟಿ. ಪಾಲೇದು, ಅನುಜ್ಞಾ ಸಾಲ್ಯಾನ್ ಅವರನ್ನು ಗೌರವಿಸಲಾಯಿತು. ವಿದ್ಯಾರ್ಥಿ ವೇತನ, ಪಿಗ್ಮಿ ಸಂಗ್ರಹಕರಿಗೆ ಗೌರವಧನ ವಿತರಿಸಲಾಯಿತು.

ನಿರ್ದೇಶಕರಾದ  ಉಷಾ ಶರತ್, ಓಬ್ಬಯ್ಯ ಬಂಗೇರ, ಅಣ್ಣು ಪೂಜಾರಿ, ಸೂರಪ್ಪ ಬಂಗೇರ, ಸದನಾಂದ ಸಾಲ್ಯಾನ್, ಸಂತೋಷ್ ಕುಮಾರ್, ಪ್ರಭಾಕರ ಸಾಲ್ಯಾನ  ಮತ್ತು ಹೇಮಂತ್ ಕುಮಾರ್ ಉಪಸ್ಥಿತರಿದ್ದರು.

ಸಿಬ್ಬಂದಿ ರೇಖಾ ಸ್ವಾಗತಿಸಿ, ಮುಖ್ಯಕಾರ್ಯ ನಿರ್ವಹಾಧಿಕಾರಿ ಮಮತಾ ಯೋಗೀಶ್ ಅಳಕ್ಕೆ ವಾರ್ಷಿಕ ವರದಿ ವಾಚಿಸಿದರು, ಸಿಬಂದಿ ದೀಪ್ತಿ ಸನ್ಮಾನ ಪತ್ರ ವಾಚಿಸಿದರು. ರವೀಂದ್ರ ಬೋಲೋಡಿ ಮತ್ತು  ಗ್ರಾ. ಪಂ. ಮಾಜಿ ಸದಸ್ಯ ಯೋಗೀಶ್  ಕುಮಾರ್ ಅಳಕ್ಕೆ ನಿರೂಪಿಸಿದರು.

Related posts

ಬೆಳ್ತಂಗಡಿ ವಕೀಲರ ನಿಯೋಗದಿಂದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳ ಭೇಟಿ: ಶಂಕುಸ್ಥಾಪನೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಬೆಳಾಲು ಮಹಾಶಕ್ತಿ ಕೇಂದ್ರದ ಯುವ ಚೌಪಾಲ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಮತ್ತು ಗ್ರಾಮೀಣ ಘಟಕದ ಪದಾಧಿಕಾರಿಗಳ ಸಭೆ

Suddi Udaya

ಕೊಕ್ಕಡ ವಿಶ್ವ ಹಿ೦ದೂ ಪರಿಷದ್‌ ಹಾಗೂ ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಗೇರುಕಟ್ಟೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ನಾಲ್ಕೂರು ಬೋವಾಡಿ ದೈವಸ್ಥಾನದಲ್ಲಿ ದೊಂಪದ ಬಲಿ ಉತ್ಸವ: ಶ್ರೀ ಕೊಡಮಣಿತ್ತಾಯ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya
error: Content is protected !!