September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೆ‌ಎಂಜೆ ವತಿಯಿಂದ “ಭಾರತದ ಬಹುತ್ವ- ಬಂಧುತ್ವದ” ಬಗ್ಗೆ ಕಾರ್ಯಕ್ರಮ, ಮೀಲಾದ್ ಸಂದೇಶ ಸಭೆ

ಬೆಳ್ತಂಗಡಿ; ಭಾರತದ ಸ್ವಾತಂತ್ರ್ಯದ ಇತಿಹಾಸವೇ ಬಹುತ್ವ ಮತ್ತು ಬಂಧುತ್ವವಾಗಿದೆ. ಇಲ್ಲಿ ಜಾತಿ ಧರ್ಮದ ವ್ಯತ್ಯಾಸಗಳಿಲ್ಲದೆ ಭಾತರ ಎಂಬ ಧ್ಯೇಯದಿಂದ ಹೋರಾಡಿದ್ದರ ಪರಿಣಾಮ ಈ ಸುಂದರ ದೇಶದ ಆಶಯ ಇಂದಿಗೂ ಭದ್ರವಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದರು.

ಗುರುವಾಯನಕೆರೆ ಬಿಬಿಎಸ್ ಸಭಾಂಗಣದಲ್ಲಿ, ಕರ್ನಾಟಕ ಮುಸ್ಲಿಂ ಜಮಾಅತ್ ಗುರುವಾಯನಕೆರೆ ಸರ್ಕಲ್ ಸಮಿತಿ ವತಿಯಿಂದ ಭಾರತದ “ಬಹುತ್ವ- ಬಂಧುತ್ವ” ವಿಚಾರ ವಿಮರ್ಷೆ ಹಾಗೂ ಮಿಲಾದ್ ಸಂದೇಶ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು.

ಅಬ್ದುಲ್ ಹಮೀದ್ ಫುರ್ಕಾನಿ ಅಧ್ಯಕ್ಷತೆ ವಹಿಸಿದ್ದರು. ಸಯ್ಯಿದ್ ಎಸ್ ಎಂ ಕೋಯ ತಂಙಳ್ ಉಜಿರೆ ಉದ್ಘಾಟಿಸಿದರು.

ಪ್ರವಾದಿಯವರ ಮೌಲಿದ್ ಪಾರಾಯಣದ ಮೂಲಕ ಕಾರ್ಯಕ್ರಮಕ್ಕೆ ದುಆದ ಮೂಲಕ ಅಬ್ದುಲ್ಲಕುಂಞಿ ದಾರಿಮಿ ಚಾಲನೆ ನೀಡಿದರು. ಮೂರು ಮತ ಧರ್ಮಗಳ ಪ್ರತಿನಿಧಿಯಾಗಿ ಭಾಗವಹಿಸಿದ್ದ ಹಾಫೀಝ್ ಮೊಹೀನುದ್ದೀನ್ ಹಮ್ಜಾಡಿ ಇಸ್ಲಾಂ ಧರ್ಮದ ಬಗ್ಗೆ, ರೆ.ಫಾ. ರೋಷನ್ ಕ್ರಾಸ್ತಾ ಕ್ರೈಸ್ತ ಧರ್ಮದ ಬಗ್ಗೆ ಹಾಗೂ ಶಿಕ್ಷಕ ಜಗನ್ನಾಥ ಅವರು ಹಿಂದೂ ಧರ್ಮದ ಬಗ್ಗೆ ತಮ್ಮ ಸಂದೇಶ ನೀಡಿದರು. ಹಾಜಿ ಹಸೈನಾರ್ ಶಾಫಿ ಶುಭ ಕೋರಿದರು.

ಕೆಎಂಜೆ ರಾಜ್ಯ ಸಮಿತಿ ಸದಸ್ಯ ಅಬ್ಬೋನು ಮದ್ದಡ್ಕ, ಹಾಜಿ ಉಸ್ಮಾನ್ ಶಾಫಿ, ಉಸ್ಮಾನ್ ಸಖಾಫಿ, ಉಮರ್ ಮಟನ್, ಹೈದರ್ ಮದ್ದಡ್ಕ, ಎಂ.ಹೆಚ್ ಅಬೂಬಕ್ಕರ್, ಹೆಚ್‌ ಎಂ ಹಸನ್, ಉಸ್ಮಾನ್ ಹಾಜಿ ಮದ್ದಡ್ಕ, ಮುಸ್ತಫಾ, ಅಬ್ದುಲ್ ರಹಮಾನ್, ರಫೀಕ್ ಮುಸ್ಲಿಯಾರ್, ಹಂಝ ಜಾರಿಗೆಬೈಲು, ಅಬುಸ್ವಾಲಿಹ್ ಗೇರುಕಟ್ಟೆ, ಹಾಫಿಲ್ ಹನೀಫ್ ಮಿಸ್ಬಾಹಿ ವೇದಿಕೆಯಲ್ಲಿದ್ದರು.
ಸಮಾರಂಭದಲ್ಲಿ ಕೆಎಂಜೆ ಸರ್ಕಲ್ ಮತ್ತು ಯೂನಿಟ್ ನಾಯಕರು, ಎಸ್‌ವೈಎಸ್, ಎಸ್ಸೆಸ್ಸೆಫ್, ಪದಾಧಿಕಾರಿಗಳು ಭಾಗವಹಿಸಿದ್ದರು.


ಎನ್.ಎಸ್ ಉಮರ್ ಕಾರ್ಯಕ್ರಮ ನಿರೂಪಿಸಿದರು. ಮಾಜಿ ಸೈನಿಕ ಮುಹಮ್ಮದ್ ರಫಿ ವಂದಿಸಿದರು.

Related posts

ಸುಲ್ಕೇರಿ ಭಗವಾನ್ ಶ್ರೀ ನೇಮಿನಾಥ ಸ್ವಾಮೀ ಬಸದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಪದ್ಮುಂಜ: ಮಲೆಂಗಲ್ಲು ನಿವಾಸಿ ಗೋಪಿ ನಿಧನ

Suddi Udaya

ಮದ್ಧಡ್ಕ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya

ಬಂಗಾಡಿ ಸಿ ಎ ಬ್ಯಾಂಕಿನ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಕೆ ಬಾಲಕೃಷ್ಣ ಗೌಡ ನಿಧನ

Suddi Udaya

ನೀರಿನ ವ್ಯವಸ್ಥೆ ಕಲ್ಪಿಸಿದ ಶಾಸಕ ಹರೀಶ್ ಪೂಂಜರವರಿಗೆ ವೇಣೂರು ಪ್ರೌಢಶಾಲಾ ವತಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿ ಗುರುದೇವ ಕಾಲೇಜು – ಭಿತ್ತಿ ಪತ್ರಿಕೆ ಅನಾವರಣ

Suddi Udaya
error: Content is protected !!