September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಮಟ್ಟದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನೋತ್ಸವ ಮತ್ತು ಶಿಕ್ಷಕರ ದಿನಾಚರಣೆ

ಬೆಳ್ತಂಗಡಿ: ಬೆಳ್ತಂಗಡಿ ಶಿಕ್ಷಕರ ದಿನಾಚರಣೆ ಸಮಿತಿ, ತಾಲೂಕು ಪಂಚಾಯತ್ ಬೆಳ್ತಂಗಡಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಪಟ್ಟಣ ಪಂಚಾಯತ್ ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನೋತ್ಸವ ಮತ್ತು ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಆ.5 ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ದೀಪ ಬೆಳಗಿಸಿ ಉದ್ಘಾಟಿಸಿದ್ದರು.

ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ , ಶ್ರೀ.ಕ್ಷೇ.ಧ.ಗ್ರಾ.ಯೋ., ಧರ್ಮಸ್ಥಳ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್ , ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ರಾಜಶ್ರೀ ಬಿ., ಬೆಳ್ತಂಗಡಿ ತಹಶೀಲ್ದಾರರು ಎಸ್.ಎನ್. ನರಗುಂದ , ತಾ.ಪಂ ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್ ಎನ್. ಉಪಸ್ಥಿತರಿದ್ದರು.


ಈ ವೇಳೆ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಪಟ್ಟಣ ಪಂಚಾಯತ್ ಆಡಳಿತಾಧಿಕಾರಿಗಳು, ಮುಖ್ಯಾಧಿಕಾರಿಗಳು, ಹಾಗೂ ಬೆಳ್ತಂಗಡಿ ತಾಲೂಕಿನ ಎಲ್ಲಾ ಗ್ರಾಮಪಂಚಾಯತ್ ಆಡಳಿತಾಧಿಕಾರಿಗಳು, ತಾಲ್ಲೂಕಿನ ಪಾಥಮಿಕ ಮತ್ತು ಪ್ರೌಢಶಾಲಾ ‘ಎಲ್ಲಾ ಶಿಕ್ಷಕ ಸಂಘಗಳ ಹಾಗೂ ಲಿಪಿಕ ನೌಕರರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿನಿ ಹಸ್ತವಿ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಗೆ ಶೇ.98.68 ಫಲಿತಾಂಶ

Suddi Udaya

ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಜಿಲ್ಲಾ ಮಟ್ಟದ ಪರಿಷತ್ತು

Suddi Udaya

ವಿಕಸಿತ ಭಾರತಕ್ಕೆ ವಿಶ್ವಾಸ ಮೂಡಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

Suddi Udaya

ಕಬ್ಬಡಿ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜು ಪುರುಷರ ವಿಭಾಗ ಚಾಂಪಿಯನ್: ತಂಡದ ಆಟಗಾರರಲ್ಲಿ ನಾಲ್ವರು ರಾಷ್ಟ್ರಮಟ್ಟದಲ್ಲಿ ಚಾಂಪಿಯನ್ ಶಿಪ್

Suddi Udaya
error: Content is protected !!