September 5, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಾದಕವಸ್ತು ಮಾರಾಟ ಯತ್ನ: ನೌಫಲ್ ಬಂಧನ

ಬೆಳ್ತಂಗಡಿ : ಡ್ರಗ್ಸ್ ಮುಕ್ತ ಸಮಾಜಕ್ಕಾಗಿ ಬೆಳ್ತಂಗಡಿ ಪೊಲೀಸರ ಬೇಟೆ ಚುರುಕುಬೆಳ್ತಂಗಡಿ : ಡ್ರಗ್ಸ್ ಮುಕ್ತ ಸಮಾಜಕ್ಕಾಗಿ ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ ಕಳೆದ ಕೆಲ ತಿಂಗಳಿಂದ ಮುಂದುವರಿದ್ದು.ಇದೀಗ ಮತ್ತೆ ಬೆಳ್ತಂಗಡಿ ಪೊಲೀಸರಿಂದ ಮಾದಕವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ಪೊಲೀಸರು ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆನಂದ್.ಎಂ ಮತ್ತು ತಂಡ ಸೆ.4 ರಂದು ರಾತ್ರಿ 9 ಗಂಟೆಗೆ ಇಲಾಖಾ ಜೀಪಿ‌ನಲ್ಲಿ ರೌಂಡ್ಸ್ ಕರ್ತವ್ಯದಲ್ಲಿರುವಾಗ ಬೆಳ್ತಂಗಡಿ ನಗರದ ರೆಂಕೆದಗುತ್ತು ಎಂಬಲ್ಲಿ ಸಾರ್ವಜನಿಕ ರಸ್ತೆಯ ಬದಿಯಲ್ಲಿ ಓರ್ವ ಯುವಕ ಪ್ಲಾಸ್ಟಿಕ್ ಚೀಲವೊಂದನ್ನು ಹಿಡಿದು ಬುಲ್ಲೆಟ್ ಬೈಕ್ ಬಳಿ ನಿಂತುಕೊಂಡಿದ್ದಾಗ ಈ ಬಗ್ಗೆ ಆತನನ್ನು ನಿಲ್ಲಿಸಿ ವಿಚಾರಿಸಿದಾಗ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಆಲಂದಿಲ ನಿವಾಸಿ ಅಬ್ದುಲ್ ಖಾದರ್ ಮಗ ನೌಫಲ್(31) ಎಂಬುವುದಾಗಿ ತಿಳಿಸಿದ್ದು. ಆತನ ಚೀಲವನ್ನು ಪರಿಶೀಲನೆ ನಡೆಸಿದಾಗ ಮಾರಾಟ ಮಾಡಿ ಉಳಿದ ಸುಮಾರು 14 ಗ್ರಾಂ ಗಾಂಜಾ ಪತ್ತೆಯಾಗಿದೆ‌. ಈ ಗಾಂಜಾವನ್ನು ಮಡದ್ಕದ ರಫೀಕ್ ಎಂಬಾತನಿಂದ ಖರೀದಿಸಿ ತಂದು ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದ ಮಾರಾಟ ಮಾಡಲು ಬಂದಿರುವುದಾಗಿ ತಿಳಿಸಿದ್ದಾನೆ.

ಆತನ ಚೀಲದಲ್ಲಿದ್ದ ಸುಮಾರು 14 ಗ್ರಾಂ ಗಾಂಜಾ, ಒಂದು KL-57-S-1424 ನಂಬರಿನ ರಾಯಲ್ ಎನ್ ಪೀಲ್ಡ್ ಬೈಕ್, ಬ್ಯಾಟರಿ ಚಾಲಿತ ತೂಕದ ಮಾಪನ ಹಾಗೂ ಆರೋಪಿ ನೌಫಲ್ ನನ್ನು ಬಂಧಿಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡನೇ ಬಾರಿ NDPS ಪ್ರಕರಣದಲ್ಲಿ ಸಿಕ್ಕಿರುವ ನೌಫಲ್ ಮತ್ತು ಗಾಂಜಾ ನೀಡಿದ ಹಲವಾರು NDPS ಪ್ರಕರಣದಲ್ಲಿ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿರುವ ಮದಡ್ಕ ನಿವಾಸಿ ರಫೀಕ್ ವಿರುದ್ಧ ಕಲಂ 8(C),20(B)(ii)(A) NDPS ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮತ್ತು ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ‌.ಬಿ.ಎಸ್ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆನಂದ್.ಎಂ ಮತ್ತು ಸಿಕಂದರ್ ಪಾಷ ನೇತೃತ್ವದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಜ.3 -4: ಭಾರತೀಯ ಜೈನ್ ಮಿಲನ್ ವಲಯ 8 ರ ಆಶ್ರಯದಲ್ಲಿ ರಾಜ್ಯ ಮಟ್ಟದ ಜಿನ ಭಜನಾ ಸ್ಪರ್ಧೆ ಸೀಸನ್ 9

Suddi Udaya

ಎಕ್ಸೆಲ್ ಪಿ ಯು ಕಾಲೇಜಿನಲ್ಲಿ ನಡೆದ “ಶೃಂಗ” ಶೈಕ್ಷಣಿಕ ಸಾಧಕರ ಅಭಿನಂದನಾ ಕಾರ್ಯಕ್ರಮ

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದ ಚಿನ್ಮಯ್ ಗೆ ಡಿ ವೀರೇಂದ್ರ ಹೆಗ್ಗಡೆ ದಂಪತಿಗಳು, ಹಾಗೂ ಡಿ. ಹರ್ಷೇಂದ್ರ ಕುಮಾರ್ ರವರಿಂದ ಅಭಿನಂದನೆ

Suddi Udaya

ಕಕ್ಯಪದವು ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಬೆಳ್ತಂಗಡಿ ತಾಲೂಕು ವಕ್ತಾರರಾಗಿ ಸಂದೀಪ್ ಎಸ್ ನೀರಲ್ಕೆ ನೇಮಕ

Suddi Udaya

ಡಿಕೆಶಿ ಮುಖ್ಯಮಂತ್ರಿ, ಇದು ಕಾರ್ಯಕರ್ತರ ಗೆಲುವು: ರಂಜನ್ ಜಿ ಗೌಡ

Suddi Udaya
error: Content is protected !!