ಬಳಂಜ: ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಇದರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 4ನೇ ವರ್ಷದ ಮೊಸರು ಕುಡಿಕೆ ಉತ್ಸವ ಸೆ.6ರಂದು ನಿಟ್ಟದ್ದ ಮೈದಾನದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಆದಿತ್ಯವಾರ ಬೆಳಗ್ಗೆ 8.30ರಿಂದ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಆಟೋಟ ಸ್ಪರ್ಧೆ,ವಿವಿಧ ಮನರಂಜನಾ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.
ಮುದ್ದುಕೃಷ್ಣ ಸ್ಪರ್ಧೆ ಉತ್ಸವದ ಪ್ರಮುಖ ಆಕರ್ಷಣೆಯಾಗಿದ್ದು, ಪುಟಾಣಿಗಳು ಶ್ರೀಕೃಷ್ಣನ ವೇಷದಲ್ಲಿ ಪಾಲ್ಗೊಂಡು ಸಂಭ್ರಮಿಸಲಿದ್ದಾರೆ.ವಿಶೇಷವಾಗಿ ಮುದ್ದುಕೃಷ್ಣ, ಬಾಲಕೃಷ್ಣ ಸ್ಪರ್ಧೆ ಪುಟಾಣಿಗಳಿಗೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ,ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್,ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ ಪುಷ್ಪಗಿರಿ,ಉದ್ಯಮಿಗಳಾದ ನಾಗೇಶ್ ಬರಾಯ,ರಾಕೇಶ್ ಹೆಗ್ಡೆ,ಶೇಖರ್ ದೇವಾಡಿಗ ಪಾಲಬೆ,ಲೋಹಿತ್ ಕುಮಾರ್ ಮುಳಿಯ,ಸಂತೋಷ್ ಕುಮಾರ್ ಕಾಪಿನಡ್ಕ, ಪ್ರವೀಣ್ ಕುಮಾರ್ ಹೆಚ್.ಎಸ್,ಸಂತೋಷ್ ಪಿ ಕೋಟ್ಯಾನ್ ಬಳಂಜ, ಸುರೇಶ್ ಪೂಜಾರಿ ಜೈಮಾತ ,ರಂಜಿತ್ ಹೆಚ್.ಡಿ,ಮನೋಹರ್ ಬಳಂಜ,ಜಗದೀಶ್ ರೈ ಹಾನಿಂಜ, ಸೂರಾಜ್ ಹಾನಿಂಜ,ಸಚಿನ್ ಶೆಟ್ಟಿ ಕುರೆಲ್ಯ,ಸದಾನಂದ ಸಾಲಿಯಾನ್ ಬಳಂಜ, ರೂಪನಾಥ ವೈ.ಎಲ್,ಪ್ರಕಾಶ್ ಪೂಜಾರಿ ಬೊಕ್ಕಸ,ದೀಪಕ್ ಹೆಚ್.ಡಿ,ದಿನೇಶ್ ಪೂಜಾರಿ ಅಂತರ, ಪ್ರವೀಣ್ ಪೂಜಾರಿ ಲಾಂತ್ಯಾರು, ಗಣೇಶ್ ಸಂಭ್ರಮ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು,ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ.












