September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಬೆಳ್ತಂಗಡಿ : ಕಲ್ಲೇರಿ ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ 2025-26 ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಅಧ್ಯಕ್ಷತೆಯಲ್ಲಿ ಕಲ್ಲೇರಿ ಬಾಪೂಜಿ ಕೇಂದ್ರದಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಮಾತನಾಡಿ,  ಸಂಘವು ಹಂತ ಹಂತವಾಗಿ ಬೆಳೆದು ಕಳೆದ ವರ್ಷ ನೂತನ ಕಟ್ಟಡ ಲೋಕಾರ್ಪಣೆಗೊಂಡಿದೆ. ಸಿಬ್ಬಂದಿಗಳ ನಗಮೊಗದ ಸೇವೆ, ಗ್ರಾಹಕರ ಸಹಕಾರದಿಂದ ಬ್ಯಾಂಕ್ ಪ್ರಗತಿ ಹಾದಿಯಲ್ಲಿ ಮುಂದುವರಿಯುತ್ತಿದ್ದು, ವಾರ್ಷಿಕವಾಗಿ 70 ಕೋಟಿ ರೂ. ವ್ಯವಹಾರ ನಡೆಸಿ, 33 ಲಕ್ಷ ರೂ. ಲಾಭ ಗಳಿಸಿದ್ದು ಸದಸ್ಯರಿಗೆ 8% ಡಿವಿಡೆಂಟ್ ಘೋಷಿಸಲಾಗಿದೆ, ಗೇರುಕಟ್ಟೆಯಲ್ಲಿ ನೂತನ ಶಾಖೆ ತೆರೆಯುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಹೇಳಿದರು.

ಕಂಬಳ ಕ್ಷೇತ್ರದ ಸಾಧಕರಾದ ದಿಲೀಪ್ ಪಂಜಿಕುಡೇಲು ಮತ್ತು ಚರಣ್, ಶೇಕ್ಷಣಿಕ ಕ್ಷೇತ್ರದ ಸಾಧಕರಾದ ತೃಪ್ತಿ ಕೆ, ಸಾತ್ವಿಕ್ ಪಿ. ಟಿ. ಪಾಲೇದು, ಅನುಜ್ಞಾ ಸಾಲ್ಯಾನ್ ಅವರನ್ನು ಗೌರವಿಸಲಾಯಿತು. ವಿದ್ಯಾರ್ಥಿ ವೇತನ, ಪಿಗ್ಮಿ ಸಂಗ್ರಹಕರಿಗೆ ಗೌರವಧನ ವಿತರಿಸಲಾಯಿತು.

ನಿರ್ದೇಶಕರಾದ  ಉಷಾ ಶರತ್, ಓಬ್ಬಯ್ಯ ಬಂಗೇರ, ಅಣ್ಣು ಪೂಜಾರಿ, ಸೂರಪ್ಪ ಬಂಗೇರ, ಸದನಾಂದ ಸಾಲ್ಯಾನ್, ಸಂತೋಷ್ ಕುಮಾರ್, ಪ್ರಭಾಕರ ಸಾಲ್ಯಾನ  ಮತ್ತು ಹೇಮಂತ್ ಕುಮಾರ್ ಉಪಸ್ಥಿತರಿದ್ದರು.

ಸಿಬ್ಬಂದಿ ರೇಖಾ ಸ್ವಾಗತಿಸಿ, ಮುಖ್ಯಕಾರ್ಯ ನಿರ್ವಹಾಧಿಕಾರಿ ಮಮತಾ ಯೋಗೀಶ್ ಅಳಕ್ಕೆ ವಾರ್ಷಿಕ ವರದಿ ವಾಚಿಸಿದರು, ಸಿಬಂದಿ ದೀಪ್ತಿ ಸನ್ಮಾನ ಪತ್ರ ವಾಚಿಸಿದರು. ರವೀಂದ್ರ ಬೋಲೋಡಿ ಮತ್ತು  ಗ್ರಾ. ಪಂ. ಮಾಜಿ ಸದಸ್ಯ ಯೋಗೀಶ್  ಕುಮಾರ್ ಅಳಕ್ಕೆ ನಿರೂಪಿಸಿದರು.

Related posts

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಬೆಳ್ತಂಗಡಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯಲ್ಲಿ ಜುಂಬಾ ಫಿಟ್ನೆಸ್ ತರಬೇತಿ ಉದ್ಘಾಟನೆ

Suddi Udaya

ವಾಣಿ ವಿದ್ಯಾ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶಾಸಕ ಹರೀಶ್ ಪೂಂಜರಿಗೆ ನೋಟಿಸ್ ನೀಡಿ, ಬಂಧನ ಕೈ ಬಿಟ್ಟು ಸಂಜೆ ಹಿಂದಿರುಗಿದ ಪೊಲೀಸರು; ರಾತ್ರಿ ಹೇಳಿಕೆ ನೀಡಲು ಬೆಳ್ತಂಗಡಿ ಠಾಣೆಗೆ ಬಂದ ಶಾಸಕ ಹರೀಶ್ ಪೂಂಜ

Suddi Udaya

ಮಚ್ಚಿನ : ಹಿರಿಯ ದೈವ ನರ್ತಕ ಬೊಮ್ಮಣ್ಣ ನಿಧನ

Suddi Udaya
error: Content is protected !!