ಶಿಶಿಲ: 2026-27ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹೊಸ್ತೋಟದ ಪ್ರಭಾರ ಮುಖ್ಯ ಶಿಕ್ಷಕಿ ಮಾಲತಿ ಒಟ್ಲ ಆಯ್ಕೆಯಾಗಿದ್ದಾರೆ.
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹೊಸ್ತೋಟದಲ್ಲಿ ಪ್ರಭಾರ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಮಾಲತಿ ಅವರ ಶಿಕ್ಷಣ ಕ್ಷೇತ್ರದಲ್ಲಿನ ಸೇವೆ, ಬೋಧನಾ ಕಾರ್ಯ ಹಾಗೂ ಸಾಧನೆಯನ್ನು ಗುರುತಿಸಿ ಈ ಪ್ರತಿಷ್ಠಿತ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಇವರು ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಒಟ್ಲ ನಿವಾಸಿಯಾಗಿದ್ದು ಪತಿ ಚಿದಾನಂದ ಕೆ. ಹಾಗೂ ಇಬ್ಬರು ಪುತ್ರಿಯರಾದ ಅನುಜ್ಞಾ ಕೆ.ಎಸ್, ದಿಶಾ ಕೆ.ಎಸ್. ರೊಂದಿಗೆ ವಾಸವಾಗಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೇ ಆದ ಸೇವೆ ಹಾಗೂ ಬದ್ಧತೆಯ ಮೂಲಕ ಗುರುತಿಸಿಕೊಂಡಿರುವ ಮಾಲತಿ ಅವರಿಗೆ ಈ ಪ್ರಶಸ್ತಿ ಲಭಿಸಿರುವುದು ಶಿಶಿಲ ಭಾಗಕ್ಕೆ ಹೆಮ್ಮೆಯ ಸಂಗತಿಯಾಗಿದೆ.












