September 6, 2026
ಸಂಘ-ಸಂಸ್ಥೆಗಳು

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ

ಬೆಳ್ತಂಗಡಿ : ರೈತರು ಸಾಲವಾಗಿ ಪಡೆದ ಹಣವನ್ನು ಸದುದ್ದೇಶ ಗಳಿಗೆ ಬಳಸಿಕೊಂಡು ಪ್ರತಿಯೊಬ್ಬ ಸದಸ್ಯರು ಕ್ಲಪ್ತ ಸಮಯದಲ್ಲಿ ಸಾಲವನ್ನು ಮರುಪಾವತಿ ಮಾಡುವುದರಿಂದ ಸಂಘ ಹೆಚ್ಚಿನ ವ್ಯವಹಾರ ಮಾಡಿ ಲಾಭ ಗಳಿಸಲು ಸಾಧ್ಯವಾಯಿತು. ಸದಸ್ಯರಿಗೆ ಶೇ.17 ಡಿವಿಡೆಂಡ್ ನೀಡಲಾಗುವುದು ಎಂದು ಕಳಿಯ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಸಭಾಭವನದಲ್ಲಿ ನಡೆದ ಮಹಾ ಸಭೆಯಲ್ಲಿ ಅಧ್ಯಕ್ಷ ವಸಂತ ಮಜಲು ಸೆ 6 ರಂದು ಘೋಷಿಸಿದರು.


2025-26 ಶೇ.97 ಶೇಕಡ ಸಾಲ ವಸೂಲಾತಿಯಾಗಿದೆ ಎಂದು ಅಧ್ಯಕ್ಷರು ತಿಳಿಸಿದರು.
2025-26 ನೇ ಸಾಲಿನಲ್ಲಿ 337 ಕೋಟಿ ವ್ಯವಹಾರ ಮಾಡಿ 1, 41ಕೋಟಿ ಲಾಭ ಹಾಗೂ ಸಾಲ ವಸೂಲಾತಿಯಲ್ಲಿ ಕಳೆದ 15 ವರ್ಷಗಳಿಂದ ಸತತವಾಗಿ ಪ್ರಶಸ್ತಿ ಡಿ.ಸಿ.ಸಿ ಬ್ಯಾಂಕ್ ನಿಂದ ಲಭಿಸುತ್ತಿದೆ ಎಂದು ಹೇಳಿದರು.ಆಡಿಟ್ ಸಂದರ್ಭ ಸಂಘವನ್ನು ‘ಎ’ತರಗತಿಯಲ್ಲಿ
ವರ್ಗೀಕರಿಸಲಾಗಿದೆ. ಮುಂದೆಯೂ ಸಂಘದ ಅಭಿವೃದ್ಧಿಗೆ ಸದಸ್ಯರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಪಿಯುಸಿ,ಎಸೆಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳನ್ನು ಗಳಿಸಿ ಸಂಘದ ಸದಸ್ಯರ ಮಕ್ಕಳನ್ನು ಗೌರವಿಸಲಾಯಿತು.
ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಂಘದ ಸದಸ್ಯರಾದ
ನಾಳ ದೇವಸ್ಥಾನದ ಪ್ರಧಾನ ಅರ್ಚಕರಾದ ವೇ.ಮೂ.ರಾಘವೇಂದ್ರ ಅಸ್ರಣ್ಣರು,ಬೆಳ್ತಂಗಡಿ ರಾಘವೇಂದ್ರ ಸ್ವಾಮಿ ಮಠ ಪ್ರಧಾನ ಅರ್ಚಕರಾದ ರಾಘವೇಂದ್ರ ಬಾಂಗೀಣ್ಣಾಯ,ನಿವೃತ್ತ ಪ್ರಾಂಶುಪಾಲರಾದ ದಿವಾಕರ ಆಚಾರ್ಯ, ಶ್ರೀಮತಿ ಸೌಭಾಗ್ಯ ಭಟ್,ಹಾಗೂ ಸಂಘದ ವಠಾರದಲ್ಲಿ ನೀರು ಖಚಿತವಾಗಿ ತಿಳಿದು ಸಂಶೋಧನೆ ಮಾಡಿ ಕೊಳವೆ ಬಾವಿಯ ಕೊರೈಯಿಸಿದ ಬಂದಾರು ಜನಾರ್ದನ ಗೌಡ ನಿರ್ಮುಡ ಅವರನ್ನು ಸನ್ಮಾನಿಸಿ, ಗೌರವಿಸಿದರು.
ಸಂಘದ ಮಳಿಗೆಯಿಂದ ಅತೀ ಹೆಚ್ಚು ರಾಸಾಯನಿಕ, ಕೃಷಿ ಉತ್ಪನ್ನ ,ಪರಿಕರ ಸಾಮಾಗ್ರಿಗಳನ್ನು ಖರೀದಿ ಮಾಡಿದ ಕೃಷಿಕರನ್ನು
ಗೌರವಿಸಲಾಯಿತು.
ಸಂಘದ ಆಡಳಿತ ಮಂಡಳಿ ಉಪಾಧ್ಯಕ್ಷ ರಾಜ್ ಪ್ರಕಾಶ್ ಶೆಟ್ಟಿ ನಿರ್ದೇಶಕರಾದ ಎಂ.ಹರಿದಾಸ ಪಡಂತ್ತಾಯ ಚಂದ್ರಾವತಿ, ಮಮತಾ ಶೆಟ್ಟಿ, ಗೋಪಾಲ ನಾಯ್ಕ್., ಕೆ.ಕುಶಾಲಪ್ಪ ಗೌಡ, ಬಾಲಕೃಷ್ಣ ಗೌಡ ಬಿರ್ಮೊಟ್ಟು .ಉದಿತ್ ಕುಮಾರ್, ಲೋಕೇಶ್ ಎನ್., ಕೇಶವ ಪೂಜಾರಿ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರತಿನಿಧಿ ಸುದರ್ಶನ್ ಮತ್ತಿತರರಿದ್ದರು.
ಸಂಘದ ಕಾರ್ಯ ನಿರ್ವಹಣಾಧಿಕಾರಿ ಕವಿತಾ ಶೆಟ್ಟಿ ಪರಿಶೋಧನಾ ವರದಿ ಮಂಡಿಸಿದರು. ಸಂತೋಷ್ ಕುಮಾರ್ ಲೆಕ್ಕ ಪತ್ರ ಮಂಡನೆ ಮಾಡಿದರು. ನಿರ್ದೇಶಕ ಶೇಖರ ನಾಯ್ಕ ಸ್ವಾಗತಿಸಿದರು.
ಉಮೇಶ್ ಕೇಲ್ದಡ್ಕ ನಿರೂಪಿಸಿದರು. ಸಂತೋಷ ಕುಮಾರ ವಂದಿಸಿದರು.

Related posts

ನಿಡ್ಲೆ ಸ.ಹಿ.ಪ್ರಾ. ಶಾಲೆಯ ಕಟ್ಟಡ ದುರಸ್ಥಿ ಕಾರ್ಯಕ್ಕೆ ಶ್ರೀ ಕ್ಷೇ. ಧ.ಗ್ರಾ.ಯೋ. ವತಿಯಿಂದ ರೂ. 1ಲಕ್ಷ ಮಂಜೂರು

Suddi Udaya

ಗುರುವಾಯನಕೆರೆ ಶ್ರೀ ಶಾರದಾಂಬ ಯಕ್ಷಗಾನ ಕಲಾ ಬಳಗದಿಂದ ಬಣ್ಣಗಾರಿಕೆ ಶಿಬಿರ

Suddi Udaya

ಬೆಳ್ತಂಗಡಿ: ‘ಶೌರ್ಯ’ ಶ್ರೀ ಧರ್ಮಸ್ಥಳ ತುರ್ತು ಸ್ಪಂದನಾ ತಂಡದ ಸಭೆ

Suddi Udaya

ಆತ್ಮಶಕ್ತಿ ಸಹಕಾರ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿ ಆಚರಣೆ ಹಾಗೂ ಗುರುವಂದನಾ ಕಾರ್ಯಕ್ರಮ

Suddi Udaya

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ರೈತಬಂಧು ಆಹಾರೋಧ್ಯಮ ಮಾಲಕ ಶಿವಶಂಕರ್ ನಾಯಕ್ ರವರು ಭೇಟಿ

Suddi Udaya

ಗೌಡರ ಯಾನೆ ಒಕ್ಕಲಿಗ ಗ್ರಾಮ ಸಮಿತಿ ಹಾಗೂ ಶಿಶಿಲ ಗ್ರಾಮದ ಬೈಲುವಾರು ಸಮಿತಿಯ ಪದಾಧಿಕಾರಿಗಳ ಸಭೆ

Suddi Udaya
error: Content is protected !!