September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆ ಪದವಿ ವಿಭಾಗದಲ್ಲಿ “ಮೂಲ ಸೌಕರ್ಯ ಹೂಡಿಕೆ ಟ್ರಸ್ಟ್” ವಿಷಯದ ಕುರಿತು ಕಾರ್ಯಾಗಾರ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್ ನಿಂದ ನಡೆಸಲ್ಪಡುವ ಎಲ್.ಸಿ.ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಸೆ.7 ರಂದು ವಾಣಿಜ್ಯ ಸಂಘದ ವತಿಯಿಂದ ಪದವಿ ವಿಭಾಗದ ಬಿ.ಕಾಂ. ವಿದ್ಯಾರ್ಥಿಗಳಿಗೆ ” ಮೂಲ ಸೌಕರ್ಯ ಹೂಡಿಕೆ ಟ್ರಸ್ಟ್” ವಿಷಯದ ಕುರಿತು ಜಾಗೃತಿ ಹಾಗೂ ಶೈಕ್ಷಣಿಕ ಅಧಿವೇಶನವನ್ನು ಆಯೋಜಿಸಲಾಯಿತು.

 ಸಂಸ್ಥೆಯ  ಸಂಯೋಜಕರಾದ ಯಶವಂತ್ ಜಿ. ನಾಯಕ್  ಕಾರ್ಯಗಾರವನ್ನು ನಡೆಸಿಕೊಟ್ಟರು.
“ಮೂಲಸೌಕರ್ಯ ಹೂಡಿಕೆ ಟ್ರಸ್ಟ್ – InvITs” ಎಂಬ ವಿಷಯದ ಕುರಿತು ವಿಶೇಷ ಜಾಗೃತಿ ಹಾಗೂ ಶೈಕ್ಷಣಿಕ ಅಧಿವೇಶನವನ್ನು ಆಯೋಜಿಸಿ,  ವಿದ್ಯಾರ್ಥಿಗಳಿಗೆ ಆಧುನಿಕ ಹೂಡಿಕೆ ವಿಧಾನಗಳು ಹಾಗೂ ಮೂಲಸೌಕರ್ಯ ಕ್ಷೇತ್ರದಲ್ಲಿನ ಹೂಡಿಕೆಯ ಅವಕಾಶಗಳ ಕುರಿತು ಅರಿವು ಮೂಡಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿರಿಸಿ,  ಮೂಲಸೌಕರ್ಯ ಹೂಡಿಕೆ ಟ್ರಸ್ಟ್‌ಗಳ ಕುರಿತು ವಿದ್ಯಾರ್ಥಿಗಳಿಗೆ ಸರಳವಾಗಿ ಹಾಗೂ ಪ್ರಾಯೋಗಿಕವಾಗಿ ವಿವರಿಸಿದರು.

ಅದೇ ರೀತಿ InvITs‌ನ ರಚನೆ, ಕಾರ್ಯವಿಧಾನ, ಪ್ರಯೋಜನಗಳು, ಹೂಡಿಕೆಯ ಅವಕಾಶಗಳು ಮತ್ತು ಸಂಭವನೀಯ ಅಪಾಯಗಳ ಕುರಿತು ಸಂಪನ್ಮೂಲ ವ್ಯಕ್ತಿಗಳು ವಿವರವಾದ ಮಾಹಿತಿಯನ್ನು ನೀಡಿದರು.
ಈ ಅಧಿವೇಶನವು ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕದ ಜ್ಞಾನವನ್ನು ನೈಜ ಹಣಕಾಸು ಕ್ಷೇತ್ರದೊಂದಿಗೆ ಸಂಪರ್ಕಿಸಲು ಸಹಕಾರಿಯಾಯಿತು.
ಕಾರ್ಯಕ್ರಮವು ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆಯೊಂದಿಗೆ ಅರ್ಥಪೂರ್ಣವಾಗಿ ಸಂಪನ್ನಗೊಂಡಿತು.

Related posts

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ 78ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಸೆ. 3: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 16ನೇ ವರ್ಧಂತ್ಯುತ್ಸವ

Suddi Udaya

ಪ್ರಸನ್ನ ಪದವಿ ಪೂರ್ವ ಕಾಲೇಜಿನಲ್ಲಿ ಮಹಿಳಾ ಸಬಲೀಕರಣ ಉಪನ್ಯಾಸ

Suddi Udaya

ಕನ್ಯಾಡಿ: ನೇರೊಳ್ದಪಲ್ಕೆ ಅಂಗನವಾಡಿಗೆ ಗ್ಯಾಸ್ ಸ್ಟೌವ್ ಕೊಡುಗೆ

Suddi Udaya

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ-9 ಸ್ಥಾನ,‌ ಕಾಂಗ್ರೆಸ್ ಬೆಂಬಲಿತ -3 ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಗ್ರಾಮೀಣ ಜೀವನೋಪಾಯ ಮತ್ತು ಸುಸ್ಥಿರತೆ: ಜಾಗತಿಕ ದೃಷ್ಟಿಕೋನ’ ಕುರಿತ ಎರಡು ದಿನದ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟನೆ

Suddi Udaya
error: Content is protected !!