ಬೆಳ್ತಂಗಡಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಬೈಂದೂರಿನಲ್ಲಿ ಚಾತುರ್ಮಾಸ್ಯ ವ್ರತಾಚರಣೆ ನಡೆಸುತ್ತಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆರ್ಶಿವಾದ ಪಡೆದರು.
ಈ ಸಂದರ್ಭ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ಕಾರ್ಯದರ್ಶಿ ನಿತೀಶ್ ಕೋಟ್ಯಾನ್, ಪ್ರಮುಖರಾದ ರಾಜೀವ ಸಾಲಿಯಾನ್, ಸಂತೋಷ್ ಕೆ.ಸಿ., ಸುನೀಲ್ ಕನ್ಯಾಡಿ, ಸಂತೋಷ್ ಉಪ್ಪಾರು, ರವೀಂದ್ರ ಅಮೀನ್, ಕಮಾಲಕ್ಷ, ಎಂ.ಕೆ ಪ್ರಸಾದ್, ಸುಮತಿ ಪ್ರಮೋದ್ ಸಹಿತ ಪದಾಧಿಕಾರಿಗಳು ಉಪಸ್ಥಿತರಿದ್ದರು.












