ಬೆಳ್ತಂಗಡಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಮಂಗಳೂರು ಇದರ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಅಂಗನವಾಡಿ ಕಾರ್ಯಕರ್ತೆಯರಿಗೆ ವಿಶೇಷ ಗೌರವಾರ್ಪಣೆ ಕಾರ್ಯಕ್ರಮವನ್ನು ಸಂಘದ ಎಲ್ಲಾ ಶಾಖೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರನ್ನು ಗೌರವಿಸುವ ಮೂಲಕ ಆಚರಿಸಲಾಯಿತು.
ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರು ವಿಶೇಷ ಗೌರವಾರ್ಪಣೆ ಕಾರ್ಯಕ್ರಮಕ್ಕೆ ಪ್ರಧಾನ ಕಚೇರಿಯಲ್ಲಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ , ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಹಾಗೂ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು..
ಸುಮಾರು 50ಕ್ಕೂ ಮಿಕ್ಕಿ ಅಂಗನವಾಡಿ ಕಾರ್ಯಕರ್ತರಿಗೆ ಸಂಘದ ಎಲ್ಲಾ ಶಾಖೆಗಳಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ವಿಶೇಷವಾಗಿ ಗೌರವಾರ್ಪಣೆ ಯನ್ನು ಮಾಡಲಾಯಿತು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘವು ಆರ್ಥಿಕ ವ್ಯವಹಾರದ ಜೊತೆ ಜೊತೆಗೆ ತನ್ನನ್ನು ಸಾಮಾಜಿಕ ಸೇವಾ ಚಟುವಟಿಕೆಗಳೊಂದಿಗೆ ಜೋಡಿಸಿಕೊಂಡು ಮುನ್ನಡೆಯುತ್ತಿದೆ. ಅದರೊಂದಿಗೆ ವಿವಿಧ ದಿನಾಚರಣೆಗಳನ್ನು ಕೂಡ ಅರ್ಥಪೂರ್ಣವಾಗಿ ಆಯೋಜಿಸಿಕೊಂಡು ಬರುತ್ತಿರುವುದು ಸಂಘದ ವಿಶೇಷತೆಗಳಲ್ಲೊಂದಾಗಿದೆ.












