September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆ ಪದವಿ ವಿಭಾಗದಲ್ಲಿ “ಮೂಲ ಸೌಕರ್ಯ ಹೂಡಿಕೆ ಟ್ರಸ್ಟ್” ವಿಷಯದ ಕುರಿತು ಕಾರ್ಯಾಗಾರ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್ ನಿಂದ ನಡೆಸಲ್ಪಡುವ ಎಲ್.ಸಿ.ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಸೆ.7 ರಂದು ವಾಣಿಜ್ಯ ಸಂಘದ ವತಿಯಿಂದ ಪದವಿ ವಿಭಾಗದ ಬಿ.ಕಾಂ. ವಿದ್ಯಾರ್ಥಿಗಳಿಗೆ ” ಮೂಲ ಸೌಕರ್ಯ ಹೂಡಿಕೆ ಟ್ರಸ್ಟ್” ವಿಷಯದ ಕುರಿತು ಜಾಗೃತಿ ಹಾಗೂ ಶೈಕ್ಷಣಿಕ ಅಧಿವೇಶನವನ್ನು ಆಯೋಜಿಸಲಾಯಿತು.

 ಸಂಸ್ಥೆಯ  ಸಂಯೋಜಕರಾದ ಯಶವಂತ್ ಜಿ. ನಾಯಕ್  ಕಾರ್ಯಗಾರವನ್ನು ನಡೆಸಿಕೊಟ್ಟರು.
“ಮೂಲಸೌಕರ್ಯ ಹೂಡಿಕೆ ಟ್ರಸ್ಟ್ – InvITs” ಎಂಬ ವಿಷಯದ ಕುರಿತು ವಿಶೇಷ ಜಾಗೃತಿ ಹಾಗೂ ಶೈಕ್ಷಣಿಕ ಅಧಿವೇಶನವನ್ನು ಆಯೋಜಿಸಿ,  ವಿದ್ಯಾರ್ಥಿಗಳಿಗೆ ಆಧುನಿಕ ಹೂಡಿಕೆ ವಿಧಾನಗಳು ಹಾಗೂ ಮೂಲಸೌಕರ್ಯ ಕ್ಷೇತ್ರದಲ್ಲಿನ ಹೂಡಿಕೆಯ ಅವಕಾಶಗಳ ಕುರಿತು ಅರಿವು ಮೂಡಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿರಿಸಿ,  ಮೂಲಸೌಕರ್ಯ ಹೂಡಿಕೆ ಟ್ರಸ್ಟ್‌ಗಳ ಕುರಿತು ವಿದ್ಯಾರ್ಥಿಗಳಿಗೆ ಸರಳವಾಗಿ ಹಾಗೂ ಪ್ರಾಯೋಗಿಕವಾಗಿ ವಿವರಿಸಿದರು.

ಅದೇ ರೀತಿ InvITs‌ನ ರಚನೆ, ಕಾರ್ಯವಿಧಾನ, ಪ್ರಯೋಜನಗಳು, ಹೂಡಿಕೆಯ ಅವಕಾಶಗಳು ಮತ್ತು ಸಂಭವನೀಯ ಅಪಾಯಗಳ ಕುರಿತು ಸಂಪನ್ಮೂಲ ವ್ಯಕ್ತಿಗಳು ವಿವರವಾದ ಮಾಹಿತಿಯನ್ನು ನೀಡಿದರು.
ಈ ಅಧಿವೇಶನವು ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕದ ಜ್ಞಾನವನ್ನು ನೈಜ ಹಣಕಾಸು ಕ್ಷೇತ್ರದೊಂದಿಗೆ ಸಂಪರ್ಕಿಸಲು ಸಹಕಾರಿಯಾಯಿತು.
ಕಾರ್ಯಕ್ರಮವು ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆಯೊಂದಿಗೆ ಅರ್ಥಪೂರ್ಣವಾಗಿ ಸಂಪನ್ನಗೊಂಡಿತು.

Related posts

ಪುದುವೆಟ್ಟು: ಶ್ರೀಮತಿ ಯಶೋದಾ ನಿಧನ

Suddi Udaya

ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಆಸರೆ 3ನೇ ಮನೆ ಹಸ್ತಾಂತರ

Suddi Udaya

ಇಂದಬೆಟ್ಟು ಎಂಜೆಎಂ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ನಡ ಕನ್ಯಾಡಿ ಅಯುಷ್ಮಾನ್ ಆರೋಗ್ಯ ಕೇಂದ್ರ ದಾರಿದೀಪ ವ್ಯವಸ್ಥೆ ಹಾಗೂ ಹೈ ಮಾಸ್ಕ್ ದೀಪ ಅಳವಡಿಕೆ: ರಕ್ಷಿತ್ ಶಿವರಾಂ

Suddi Udaya

ಎಕ್ಸಿಟ್ ಪೋಲ್ ವರದಿ: ಮತ್ತೊಮ್ಮೆ ಎನ್.ಡಿ.ಎ ಮೈತ್ರಿಕೂಟ ಅಧಿಕಾರಕ್ಕೆ ಎನ್‌ಡಿಎ ಮೈತ್ರಿಕೂಟಕ್ಕೆ 350ಕ್ಕಿಂತ ಹೆಚ್ಚು ಸ್ಥಾನ: ಕಾಂಗ್ರೆಸ್ ನೇತೃತ್ವ ಮೈತ್ರಿಕೂಟ 125ರಿಂದ 150ಸ್ಥಾನ

Suddi Udaya

ಪುದುವೆಟ್ಟು ಬಾಯಿತ್ಯಾರು ವೀರಪ್ಪ ಗೌಡರಿಗೆ ಧರ್ಮಸ್ಥಳದಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!