September 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ವಶಕ್ಕೆ

ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಗುಂಡೂರು ಎಂಬಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಮತ್ತು ಇಂದಬೆಟ್ಟು ಗ್ರಾಮದ ಬೀಟ್ ಸಿಬ್ಬಂದಿಗೆ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ಮಾಹಿತಿ ಲಭಿಸಿದ್ದು, ಈ ಹಿನ್ನೆಲೆಯಲ್ಲಿ ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಸಿಕಂದರ್ ಪಾಷ ನೇತೃತ್ವದ ಪೊಲೀಸರು ಸೆ.6 ರಂದು ಸಂಜೆ 3:15 ಕ್ಕೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಎರಡು ಕೋಳಿಗಳ ಕಾಲಿಗೆ ಬಾಳು ಕಟ್ಟಿ, ಅವುಗಳನ್ನು ಎದುರುಬದುರು ಹಾರಿಸಿ ಹಣವನ್ನು ಪಣವಾಗಿರಿಸಿ ಕೋಳಿ ಅಂಕ ನಡೆಸುತ್ತಿರುವುದು ಪೊಲೀಸರ ಗಮನಕ್ಕೆ ಬಂದಿದೆ. ಪೊಲೀಸರನ್ನು ಕಂಡ ಕೆಲವರು ಕೋಳಿಗಳೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾರೆ.

ಬಳಿಕ ಪೊಲೀಸರು ಹಿಂಬಾಲಿಸಿ ಐವರನ್ನು ವಶಕ್ಕೆ ಪಡೆದಿದ್ದಾರೆ.ವಶಕ್ಕೆ ಪಡೆದವರನ್ನು ಕಡಿರುದ್ಯಾವರ ಗ್ರಾಮದ ತಿಮ್ಮಯ್ಯ ಗೌಡ (59), ಕಲ್ಮಂಜ ಗ್ರಾಮದ ರಾಘವೇಂದ್ರ (37), ಕಣಿಯೂರು ಗ್ರಾಮದ ಉಮೇಶ್ (26), ಕಡಿರುದ್ಯಾವರ ಗ್ರಾಮದ ಬಾಲಕೃಷ್ಣ ಗೌಡ (58) ಹಾಗೂ ಮುಂಡಾಜೆ ಗ್ರಾಮದ ಭವಿತ್ (24) ಎಂದು ಗುರುತಿಸಲಾಗಿದೆ.ಸ್ಥಳದಲ್ಲಿ ಮೂರು ಕೋಳಿಗಳು ಹಾಗೂ ಒಂದು ಸಣ್ಣ ಕತ್ತಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ಕೋಳಿ ಅಂಕಕ್ಕೆ ಬಳಸಿದ್ದರೆನ್ನಲಾದ ಒಟ್ಟು 3,400 ರೂಪಾಯಿ ನಗದು ಹಣವನ್ನು ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 87 ಕೆಪಿ ಆಕ್ಟ್, 11(1)(a)(n) Prevention of Animal Cruelty Act ಹಾಗೂ 112 r/w 3(5) BNS-2023 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಸಹಾಯಕ ಕಾನೂನು ಅಭಿರಕ್ಷಕರಾಗಿ ನ್ಯಾಯವಾದಿ ಕುಮಾರಿ ಸ್ವಾತಿ ಕುಲಾಲ್ ನೇಮಕ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಗಣಪತಿ ಗುಡಿಯ ಹಾಗೂ ಪಿಲಿಚಂಡಿ ದೈವದ ದಾರಂದ ಮುಹೂರ್ತ

Suddi Udaya

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ದಾಳಿ

Suddi Udaya

ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya

ಪಿಯುಸಿ ಫಲಿತಾಂಶ: ವಾಣಿಜ್ಯ ವಿಭಾಗದಲ್ಲಿ ವರ್ಷ ಅವರಿಗೆ ಶೇ 96.66 ಫಲಿತಾಂಶ

Suddi Udaya

ಬಳಂಜ: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜಾ

Suddi Udaya
error: Content is protected !!