ನಡ : ಇಲ್ಲಿನ ಪಾದೆ ಕಂಚೆಲು ಮಂಜಲ ನಾಗರಿಕರಿಂದ ರಸ್ತೆ ಕಾಂಕ್ರಿಟೀಕರಣಕ್ಕೆ ಆಗ್ರಹಿಸಿ ಮುಂಬರುವ ಎಲ್ಲಾ ಚುನಾವಣೆಗಳನ್ನು ಬಹಿಷ್ಕರಿಸುವ ಬಗ್ಗೆ ನಿಧಾ೯ರ ಕೈಗೊಳ್ಳಲಿದ್ದಾರೆ.
ಪಾದೆಯಿಂದ ಕಂಚೇಲು ಮಂಜಲ ಸುಮಾರು 2 ಕಿ.ಮೀ ರಸ್ತೆ ವಾಹನ ಸಂಚಾರಕ್ಕೆ, ಶಾಲಾ ಮಕ್ಕಳಿಗೆ, ಅನಾರೋಗ್ಯ ಪೀಡಿತರಿಗೆ ತೀರಾ ಕಷ್ಟಕರ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ.
ಈ ಭಾಗದ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಅತೀ ಶೀಘ್ರ ದಲ್ಲಿ ರಸ್ತೆ ಕಾಂಕ್ರಿಟೀಕರಣ ಮಾಡಿಕೊಟ್ಟಲ್ಲಿ ಮಾತ್ರ, ಸುಮಾರು 48 ಮನೆಯವರು ಒಟ್ಟು ಸೇರಿ ಮುಂಬರುವ ಚುನಾವಣೆಗಳಲ್ಲಿ ಮತದಾನ ಮಾಡುವುದು. ಇಲ್ಲವಾದಲ್ಲಿ ಮತದಾನ ಬಹಿಷ್ಕರಿಸುವ ಬಗ್ಗೆ ಸರ್ವಾನುಮತದಿಂದ ನಿರ್ಣಯ ಕೈಗೊಂಡಿದ್ದಾರೆ.












