September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಮೈತ್ರಿ ಯುವಕ ಮಂಡಲದ ಸಹಯೋಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವದ ಉದ್ಘಾಟನೆ

ಬೆಳಾಲು : ಸೆ 06 ಮೈತ್ರಿ ಯುವಕ ಮಂಡಲ ಬೆಳಾಲು ಇದರ ಸಹಯೋಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವದ ಉದ್ಘಾಟನಾ ಕಾರ್ಯಕ್ರಮ ಸೆ. 06 ರಂದು ಯುವಕ ಮಂಡಲದ ವಠಾರದಲ್ಲಿ ನೆರವೇರಿತು.

ಶ್ರೀ ಅನಂತ ಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಅರ್ಚಕರಾದ ಸಂಪತ್ ಕುಮಾರ್ ದೀಪ ಪ್ರಜ್ವಲನೆಗೊಳಿಸುವ ಮೂಲಕ ಚಾಲನೆ ನೀಡಿ, ಶುಭ ಹಾರೈಸಿದರು. ಉದ್ಯಮಿಗಳಾದ ಸತೀಶ್ ಗೌಡ ಗಣಪನಗುತ್ತು, ಶ್ರೀ ಧ.ಮ. ಪ್ರೌಢಶಾಲೆ ಬೆಳಾಲು ಅಧ್ಯಾಪಕರಾದ ಕಿರಣ್ ಜೈನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಯುವಕ ಮಂಡಲ ಗೌರವಾಧ್ಯಕ್ಷರಾದ ನಿತಿನ್ ಮೋನಿಸ್, ಅಧ್ಯಕ್ಷ ನವನೀತ್ ಗೌಡ, ಕಾರ್ಯದರ್ಶಿ ಕಿರಣ್ ಸುವರ್ಣ ವೇದಿಕೆಯಲ್ಲಿದ್ದರು.

ಈ ಸಂದರ್ಭದಲ್ಲಿ ಯುವಕ ಮಂಡಲದ ಗೌರವ ಸಲಹೆಗಾರರು ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಜತ್ತನ್ನ ಗೌಡ, ನೋಟರಿ ವಕೀಲರಾದ ಶ್ರೀನಿವಾಸ್ ಗೌಡ ಗೌಡ ಶ್ರೀ ಸೌಧ ಬೆಳಾಲು, ವಕೀಲರಾದ ಕೇಶವ್ ಗೌಡ ಪಿ., ಅಧ್ಯಪಕರಾದ ಭರತ್ ಬೆಳಾಲು, ಅನಿಲ್ ಡಿ ಸೋಜ, ಶ್ಯಾಮ್ ರಾಯ ಆಚಾರ್ಯ, ಡೀಕಯ್ಯ ಗೌಡ ಅರಣೆಮಾರು,ಕೇಶವ ಟೈಲರ್, ದಿನೇಶ್, ಹರೀಶ್ ದರ್ಖಾಸು ಬೆಳಾಲು,ಹಾಗೂ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ, ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸ್ವಾತಿ ಪ್ರಾರ್ಥನೆಗೈದರು, ಸ್ವಾಗತ ನವನೀತ್ ಅಧ್ಯಕ್ಷರು ಮೈತ್ರಿ ಯುವಕ ಮಂಡಲದ ಅಧ್ಯಕ್ಷ ನವನೀತ್ ಗೌಡ ಸ್ವಾಗತಿಸಿ, ಕಾರ್ಯದರ್ಶಿ ಕಿರಣ್ ಸುವರ್ಣ ಈರೆಂತ್ಯಾರು ಧನ್ಯವಾದವಿತ್ತರು,
ಅಧ್ಯಪಕರಾದ ಭರತ್ ನಿರೂಪಣೆಗೈದರು. ಆಕರ್ಷಣೆಯ ಕೃಷ್ಣ ವೇಷ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆಗಳು ನೆರವೇರಿತು.

Related posts

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಜಾತ್ರಾಮಹೋತ್ಸವದ ಸಮಾಲೋಚನಾ ಸಭೆ

Suddi Udaya

ಕರಾಟೆ ಚಾಂಪಿಯನ್‌ಶಿಪ್: ಹಿಮಾನ್ಸ್ ಕುಮಿಟೆ ಮತ್ತು ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತೆಕ್ಕಾರು: ಬಾಜಾರು ಓಂ ರಾಮ್ ಫ್ರೆಂಡ್ಸ್ ಆಶ್ರಯದಲ್ಲಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹಿಂಭಾಗದಲ್ಲಿ ಕ್ಷೇತ್ರದ ವತಿಯಿಂದ ರಸ್ತೆಗೆ ಅಳವಡಿಸಿದ ಗೇಟು ತೆರವು

Suddi Udaya

ಕರ್ನಾಟಕ ರಾಜ್ಯ ಟೈಲರ್ ಸಂಘದ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ ಆಟಿಡೊಂಜಿ ದಿನ

Suddi Udaya
error: Content is protected !!