September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.14: ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂಡಳಿಯ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಹಗ್ಗಜಗ್ಗಾಟ, ಕಬಡ್ಡಿ, ತ್ರೋಬಾಲ್ ಸ್ಫರ್ಧೆಗಳಿಗೆ ಹೆಸರು ನೋಂದವಣಿಗೆ ಸೆ.10 ಕೊನೆ ದಿನ

ಕುಪ್ಪೆಟ್ಟಿ: ಶ್ರೀ ಗಣೇಶ ಭಜನಾ ಮಂಡಳಿ ಕುಪ್ಪೆಟ್ಟಿ, ಶ್ರೀ ದುರ್ಗಾ ಗಣೇಶ ಮಾತೃ ಮಂಡಳಿ ಮತ್ತು ಕಟ್ಟಡ ಅಭಿವೃದ್ಧಿ ಸಮಿತಿ ಕುಪ್ಪೆಟ್ಟಿ ವತಿಯಿಂದ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ವೇ. ಮೂ. ಕೆ.ಯಂ. ಪ್ರಸನ್ನ ಮುಚ್ಚಿನ್ನಾಯರು `ನೈದಿಲೆ’ ಹಲೇಜಿ ಇವರ ವೈದಿಕ ನೇತೃತ್ವದಲ್ಲಿ ಸೆ.14ರಂದು ಶ್ರೀ ಗಣೇಶ ಭಜನಾ ಮಂದಿರ ಕುಪ್ಪೆಟ್ಟಿಯಲ್ಲಿ ನಡೆಯಲಿದೆ.

ಇದರ ಅಂಗವಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಹಗ್ಗಜಗ್ಗಾಟ, ಕಬಡ್ಡಿ, ತ್ರೋಬಾಲ್ ಪಂದ್ಯಗಳಿಗೆ ಪ್ರವೇಶ ಶುಲ್ಕ ಕಡ್ಡಾಯವಾಗಿದ್ದು ತಂಡದ ಹೆಸರು ನೊಂದಾಯಿಸಿಕೊಳ್ಳಲು ಸೆ.10ರ ಸಂಜೆ 6 ಗಂಟೆಯ ತನಕ ಅವಕಾಶ ಕಲ್ಪಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಸ್ಪರ್ಧೆಗಳ ವಿವರ
ಪುರುಷರಿಗೆ ಮತ್ತು ಮಹಿಳೆಯರಿಗೆ ಹಗ್ಗಜಗ್ಗಾಟ ,ಪುರುಷರಿಗೆ ಕಬಡ್ಡಿ(ಮುಕ್ತ) ಹಾಗೂ ಗುಂಡು ಎಸೆತ, ಬಲೂನ್ ಓಟ, ಪ್ರೌಢಶಾಲಾ ವಿಭಾಗ ಕಬಡ್ಡಿ, ಮಹಿಳೆಯರಿಗೆ ತ್ರೋಬಾಲ್, ಗುಂಡು ಎಸೆತ, ಸಂಗೀತ ಕುರ್ಚಿ ನಡೆಯಲಿದೆ. ಅಂಗನವಾಡಿಯಿಂದ 10 ತರಗತಿ ಮಕ್ಕಳಿಗೆ ವಿವಿಧ ಮಾದರಿಯ ಸ್ಪರ್ಧೆಗಳ ನಡೆಯಲಿರುವುದು ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಕಾಂಬೋಡಿಯ ತಂಡದಿಂದ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ನಾರಾವಿ ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಕಕ್ಕಿಂಜೆ ಸ. ಪ್ರೌ. ಶಾಲಾ ಇಬ್ಬರು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ: ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ವಾರ್ಷಿಕೋತ್ಸವ

Suddi Udaya

ವೇಣೂರು ಸರಕಾರಿ ಪ್ರೌಢಶಾಲೆಯಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!