September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಈದ್‌ಮಿಲಾದ್ ಆಚರಣೆ

ಬೆಳ್ತಂಗಡಿ: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಈದ್ ಮಿಲಾದ್ ಆಚರಣೆ ಅರ್ಥಪೂರ್ಣವಾಗಿ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಸೂರಜ್ ಚಾರ್ಲ್ಸ್ ನ್ಯೂನಸ್ ವಹಿಸಿದ್ದು, ಕಾಲೇಜಿನಲ್ಲಿ ಸರ್ವಧರ್ಮದ ಹಬ್ಬಗಳನ್ನೂ ಆಚರಿಸಲಾಗುತ್ತಿದೆ. ಇದು ವಿದ್ಯಾರ್ಥಿ ಜೀವನದಿಂದಲೇ ಸೌಹಾರ್ದತೆಯ ನೆಲೆಗಟ್ಟನ್ನು ಗಟ್ಟಿಗೊಳಿಸುವ ಸಲುವಾಗಿ ಮತ್ತು ಪರಸ್ಪರ ಹಬ್ಬದ ಸಂದೇಶ ಹಂಚಿಕೆ, ಅದರೊಳಗಿನ ಸಂಸ್ಕೃತಿ ಸಾರ ತಿಳಿಯಲು ಅನುಕೂಲವಾಗುತ್ತದೆ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹಿರಿಯ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಮಾತನಾಡಿ, ಕ್ರೈಸ್ತ ಸಂಸ್ಥೆಯಾದ ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಈದ್ ಹಬ್ಬವನ್ನು ಆಚರಿಸಲಾಗುತ್ತಿರುವುದು ವಿಶೇಷ. ಇದರ ಸಂಯೋಜಕರಾಗಿ ಉಪನ್ಯಾಸಕರಾದ ಅಶ್ವಿನಿ ಮತ್ತು ಪ್ರಿಯಾ ಅವರು ಜವಾಬ್ದಾರಿ ತೆಗೆದುಕೊಂಡಿದ್ದು, ಮತೀಯ ಸೌಹಾರ್ದತೆ ಸೂಚಿಸುತ್ತದೆ. ಪ್ರವಾದಿಯವರು ಹುಟ್ಟುವ ಕಾಲದಲ್ಲಿ ಅಂಧಕಾರದ ಕಾರ್ಗತ್ತಲು ಇತ್ತು. ಹೆಣ್ಣು ಮಗುವಿನ ಜೀವಂತ ಹೂಳುವಿಕೆ, ದುಡಿದವಿಗೆ ವೇತನ ನೀಡದೆ ತಾರತಮ್ಯ, ವ್ಯಸನಗಳ ಗೂಡಾಗಿದ್ದ ಜನತೆಗೆ ಪರಿವರ್ತನೆಯ ಮಾನವೀಯ ಸಂದೇಶದ ಜೊತೆಗೆ ಅವರ ಜನನವಾಯಿತು ಎಂದರು.‌

ಕಾರ್ಯಕ್ರಮ ಸಂಯೋಜಕರಾದ ಅಶ್ವಿನಿ ಮತ್ತು ಪ್ರಿಯಾ ವೇದಿಕೆಯಲ್ಲಿದ್ದರು. ವಿದ್ಯಾರ್ಥಿಗಳೇ ನಿರ್ವಹಿಸಿದ ಕಾರ್ಯಕ್ರಮದಲ್ಲಿ
ವಫಾ ಸ್ವಾಗತಿಸಿದರು. ಯುಸೈರ ಹಾಗೂ ಸೌಮ್ಯಾ ನಿರೂಪಿಸಿದರು.
ವಿಯಾನಿ ವಂದಿಸಿದರು. ಇಸ್ಲಾಮಿಕ್ ಸಾಂಪ್ರದಾಯಿಕ ದಪ್ಫ್ ಪ್ರದರ್ಶನ, ಪ್ರವಾದಿ ನಾಮಸಂಕೀರ್ತನೆಯ ಮೌಲೀದ್ ಮತ್ತು ಬುರ್ದಾ ಆಲಾಪನೆ ಸಹಿತ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಲಾಯಿತು. ಎಲ್ಲಾ ಉಪನ್ಯಾಸಕ ವೃಂದದವರು ಸಹಕರಿಸಿದರು.

Related posts

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ ಮೊಟಾರ್ ರಿವೈಂಡಿಂಗ್ ಮತ್ತು ಮೆನ್ಸ್ ಪಾರ್ಲರ್ ಮೆನೇಜ್‌ಮೆಂಟ್ ತರಬೇತಿಗಳ ಸಮಾರೋಪ ಸಮಾರಂಭ

Suddi Udaya

ರಾಜ್ಯದ ಜನರಿಗೆ ಬೆಲೆ ಏರಿಕೆ ಮೂಲಕ ಬರೆ ಎಳೆದ ಕಾಂಗ್ರೆಸ್ ಸರಕಾರ :ಉಚಿತ ಗ್ಯಾರಂಟಿಯ ಹೊರೆ ಭರಿಸಲಾದೆ ಸರ್ಕಾರ ದಿವಾಳಿ ಅಂಚಿಗೆ

Suddi Udaya

ಧರ್ಮಸ್ಥಳ: ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದಲ್ಲಿ ಗಣರಾಜ್ಯೋತ್ಸವ ಆಚರಣೆ – ಭಾರತ ವಿಶ್ವಗುರುವಾಗಬೇಕು : ಎಚ್.ಎನ್. ಚಂದ್ರಶೇಖರ್

Suddi Udaya

ಬೆಳ್ತಂಗಡಿ ಬಿಜೆಪಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶ

Suddi Udaya

ಉಜಿರೆ ದೇವಸ್ಥಾನದ ವಿಜಯಗೋಪುರ ನಿರ್ಮಾಣ ಕಾರ್ಯಾಲಯ ಉದ್ಘಾಟನೆ

Suddi Udaya

ಮರೋಡಿ ಗ್ರಾ.ಪಂನಿಂದ ಪೆರಾಡಿಯಲ್ಲಿ ನಿರ್ಮಿಸಲಾದ ರೂ.5.60 ಲಕ್ಷ ವೆಚ್ಚದ ಸೋಲಾರ್ ದೀಪ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!