32.1 C
ಪುತ್ತೂರು, ಬೆಳ್ತಂಗಡಿ
September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, ಉಜಿರೆ (ರಾಜ್ಯ ಪಠ್ಯಕ್ರಮ)ದಲ್ಲಿ ಸೆ. 7ರಂದು ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ಭಾರತೀಯ ಸಂಸ್ಕೃತಿ, ಪರಂಪರೆ ಹಾಗೂ ಹಬ್ಬಗಳ ಮಹತ್ವವನ್ನು ಪರಿಚಯಿಸುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಜನ್ಮಾಷ್ಟಮಿ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ವಿವಿಧ ಮನರಂಜನಾತ್ಮಕ ಕ್ರೀಡೆಗಳು ಮತ್ತು ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಶಾಲಾ ಉಪನಾಯಕ ಹರೀಶ್ ಪಟೇಲ್ ಕೃಷ್ಣ ಜನ್ಮಾಷ್ಟಮಿಯ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಸಂಭ್ರಮಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಮುಖ್ಯ ಅತಿಥಿ ಸುಭಾಷ್ ಚಂದ್ರ, ದೈಹಿಕ ಶಿಕ್ಷಕರು, ಕಾಂಚನ ವೆಂಕಟಸುಬ್ರಹ್ಮಣ್ಯಂ ಸ್ಮಾರಕ ಪ್ರೌಢಶಾಲೆ ಕಾಂಚನ ಅವರು ಬಹುಮಾನಗಳನ್ನು ವಿತರಿಸಿ ಅಭಿನಂದಿಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶ್ರೀಕೃಷ್ಣನ ಬಾಲಲೀಲೆಗಳನ್ನು ಸ್ಮರಿಸುತ್ತಾ ಆಚರಿಸಲಾದ ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಸಂತಸ ಹಾಗೂ ಉತ್ಸಾಹ ಮೂಡಿಸಿತು.

Related posts

ಬೆಳ್ತಂಗಡಿ ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya

ವೇಣೂರು ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ತರಬೇತಿ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ.

Suddi Udaya
error: Content is protected !!