32.1 C
ಪುತ್ತೂರು, ಬೆಳ್ತಂಗಡಿ
September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಗ್ರಾಮ ಪಂಚಾಯತ್ ಗ್ರಾಮ ಸಭೆ: ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ – ಉಪನ್ಯಾಸಕರಿಗೆ ಗೌರವ

ಕೊಯ್ಯೂರು : ಕೊಯ್ಯೂರು ಗ್ರಾಮ ಪಂಚಾಯತಿನ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಸೆ.8ರಂದು ಪಂಚದುರ್ಗಾ ಸಭಾಭವನ ಆದೂರ್ ಪೆರಾಲ್ ನಲ್ಲಿ ಪಂಚಾಯತ್ ಆಡಳಿತಾಧಿಕಾರಿ ಮಹೇಶ್ ಮಂಜಪ್ಪ ದೇವಾಡಿಗ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಲಕ್ಷ್ಮೀ ಅವರು ಗ್ರಾಮ ಸಭೆಯ ಮುನ್ನಡೆಸಿದರು. ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.

2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಪಡೆದ ಕೊಯ್ಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರನ್ನು ಹಾಗೂ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಸಭೆಯಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ದಯಮಣಿ, ಉಪಾಧ್ಯಕ್ಷ ಹರೀಶ್, ಮಾಜಿ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪರಮೇಶ್ವರ್ ಸ್ವಾಗತಿಸಿದರು. ಸಿಬ್ಬಂದಿ ವಸಂತ್ ವರದಿ ವಾಚಿಸಿದರು. ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ದೂರುದಾರ ಎಸ್.ಐ.ಟಿ ತನಿಖೆ ಮುಗಿಸಿ ವಾಪಸ್

Suddi Udaya

ಆ.18 ರ ದೇಶವ್ಯಾಪಿ ಕಾರ್ಮಿಕ ಪ್ರತಿಭಟನೆಗೆ ಬೆಳ್ತಂಗಡಿ ತಾಲೂಕಿನಿಂದ ಬೆಂಬಲ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ರವರ ಭೇಟಿ

Suddi Udaya

ಹತ್ಯಡ್ಕ ಗ್ರಾಮದ ಪಲಸ್ತಡ್ಕ ನಿವಾಸಿ ಸಂಜೀವ ಗೌಡ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಮಾಶಾಸನ ವಿತರಣೆ

Suddi Udaya

ತುಳುಕೂಟ ಇಸ್ರೇಲ್ ವತಿಯಿಂದ ಮಂಜುಶ್ರೀ ಸೀನಿಯರ್ ಛೇಂಬರ್ ಬೆಳ್ತಂಗಡಿ ಆಶ್ರಯದಲ್ಲಿ ಕಿಲ್ಲೂರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿ ವಿತರಣೆ

Suddi Udaya
error: Content is protected !!