32.1 C
ಪುತ್ತೂರು, ಬೆಳ್ತಂಗಡಿ
September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಪ್ಯಾಕ್ಸ್ ಮಹಾಸಭೆ: ರೂ.158 ಕೋಟಿ ವ್ಯವಹಾರ, ರೂ.68,41,887 ನಿವ್ವಳ ಲಾಭ, ಸದಸ್ಯರಿಗೆ 11% ಡಿವಿಡೆಂಟ್-ಮುಗುಳಿ ನಾರಾಯಣ ರಾವ್

ಬೆಳ್ತಂಗಡಿ: ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2025-26ನೇ ಸಾಲಿನ ಮಹಾಸಭೆಯು ಸೆ.8 ರಂದು ಸಂಘದ ಜೇಷ್ಠ ಸಭಾಭವನದಲ್ಲಿ ಜರುಗಿತು.

ಸಂಘದ ಅಧ್ಯಕ್ಷ ಮುಗುಳಿ ನಾರಾಯಣ ರಾವ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘವು ೨೦೨೫-೨೬ರ ಸಾಲಿನಲ್ಲಿ ಒಟ್ಟು ೨,೫೦,೮೬,೮೧೦ ಬಂಡವಾಳ ಹೊಂದಿದ್ದು, ಒಟ್ಟು ರೂ. ೩೩,೬೬,೨೫,೩೬೯ ಠೇವಣಿ ಸಂಗ್ರಹವಾಗಿರುತ್ತದೆ. ರೂ.158ಕೋಟಿ ವ್ಯವಹಾರ ನಡೆಸಿ ರೂ.68,41,887 ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.11ರಷ್ಟು ಡಿವಿಡೆಂಟ್ ನೀಡುವುದಾಗಿ ಘೋಷಿಸಿದರು.

ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಪದವಿ, ವೃತ್ತಿಪರ ಕೋರ್ಸ್ಗಳಲ್ಲಿ ಉತ್ತಮ ಅಂಕ ಪಡೆದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು. ಸಂಘದ ಶತಮಾನೋತ್ಸವದ ಸವಿ ನೆನಪಿಗಾಗಿ ಸದಸ್ಯರಿಗೆ ಕಿರುಕಾಣಿಕೆಯನ್ನು ನೀಡಲಾಯಿತು.

ಸಂಘದ ಉಪಾಧ್ಯಕ್ಷ ವಡಿವೇಲು, ನಿರ್ದೇಶಕರಾದ ಭಗೀರಥ ಜಿ., ಸುಜಿತಾ ವಿ.ಬಂಗೇರ, ಸಚಿನ್ ಕುಮಾರ್ ನೂಜೋಡಿ, ನಾರಾಯಣ ಪೂಜಾರಿ ಬರೆಮೇಲು, ಪುರಂದರ ಶೆಟ್ಟಿ ಪಾಡ್ಯಾರ್, ಅರುಣ್ ಕುಮಾರ್, ಜಯಂತಿ, ಮೋಹನ್ ನಾಯ್ಕ, ಶಶಿರಾಜ್ ಶೆಟ್ಟಿ, ಡಿ.ಸಿ.ಸಿ. ಪ್ರತಿನಿಧಿ ಸಿರಾಜುದ್ದೀನ್ ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿಕಲಾ ಎನ್. ವಾರ್ಷಿಕ ವರದಿ ಮಂಡಿಸಿದರು. ನಿರ್ದೇಶಕ ಅನಂತರಾಜ್ ಜೈನ್ ವಂದಿಸಿದರು. ಸಂಘದ ಸಿಬ್ಬಂದಿಗಳಾದ ಮಮತಾ, ಚೇತನ ಕೆ, ಭಾಗ್ಯಶ್ರೀ ಡಿ, ಅಕ್ಷತ್, ಯಶೋಧ, ನವೋದಯ ಪ್ರೇರಕಿ ಪ್ರತಿಭಾ ಸಹಕರಿಸಿದರು.

Related posts

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ತಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಶಶಾಂಕ ಕುಳಮರ್ವ ರವರಿಗೆ ಸುರತ್ಕಲ್ ಎನ್.ಐ.ಟಿ.ಕೆ. ಯಿಂದ ಪಿ.ಎಚ್.ಡಿ. ಪದವಿ

Suddi Udaya

ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಭೇಟಿ

Suddi Udaya

ಉಜಿರೆ: ಭಜರಂಗದಳ ಕಾರ್ಯಕರ್ತರಿಂದ ಮಿಂಚಿನ ಕಾರ್ಯಾಚರಣೆ: ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ಗೋವುಗಳ ರಕ್ಷಣೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಹೋಲಿ ರಿಡೀಮರ್ ಶಾಲೆಗೆ ಸತತ 11ನೇ ಬಾರಿಗೆ ಶೇ.100 ಫಲಿತಾಂಶ

Suddi Udaya

ಉಜಿರೆಯಲ್ಲಿ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ

Suddi Udaya
error: Content is protected !!