ಗುರುವಾಯನಕೆರೆ : ಆಗಸ್ಟ್ ತಿಂಗಳಲ್ಲಿ ನಡೆದ 2102ನೇ ಮದ್ಯವರ್ಜನ ಶಿಬಿರದ ಪ್ರಥಮ ಮಾಸಿಕ ಸಭೆಯನ್ನು ಶ್ರೀ ಗಣಪತಿ ಸಭಾಭವನ ಪಡಂಗಡಿಯಲ್ಲಿ ನಡೆಯಿತು.
ಮಾಸಿಕ ಸಭೆಯನ್ನು ಕ್ಷೇತ್ರ ಯೋಜನಾಧಿಕಾರಿಗಳಾದ ಹರೀಶ್ ರವರು ದೀಪ ಬೆಳಗಿಸುವ ಮೂಲಕ ಸಭೆಯನ್ನು ಉದ್ಘಾಟಿಸಿ ಹೊಸ ಜೀವನ ನಡೆಸುತ್ತಿರುವ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

ಸಭೆಯ ಅಧ್ಯಕ್ಷತೆಯನ್ನು 2102ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುರೇಶ್ ಪೂಜಾರಿ ರವರು ವಹಿಸಿ ಶುಭ ಹಾರೈಸಿದರು.
ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯರವರು ಸಭೆಯಲ್ಲಿ ನವಜೀವನ ಸಮಿತಿ ಬಲವರ್ಧನೆ ಮತ್ತು ಅನು ಪಾಲನೆ, ನವಜೀವನ ಸಮಿತಿ ಸದಸ್ಯರ ವಾರದ ಸಭೆಯ ವರದಿ, ಹಾಜರಾತಿ ಕುರಿತು ,ಫ್ರೀ ಕಾನ್ಫರೆನ್ಸ್ ಸಭೆ, ಶತದಿನೋತ್ಸವ ಕುರಿತು ಮಾಹಿತಿ ನೀಡಿದರು .

ಮುಖ್ಯ ಅತಿಥಿಗಳಾದ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಗಿರೀಶ್, ಜನಜಾಗೃತಿ ವೇದಿಕೆ ಸದಸ್ಯರಾದ ರಿಚರ್ಡ್ ಗೋವಿಯಸ್, ಜನಜಾಗೃತಿ ವಲಯಾಧ್ಯಕ್ಷ ಹರೀಶ್ ಕೋಟ್ಯಾನ್, ವ್ಯವಸ್ಥಾಪನ ಸಮಿತಿ ಸದಸ್ಯರಾದ ಭಾಸ್ಕರ, ಶಿಬಿರದ ಯೋಗ ಶಿಕ್ಷಕರಾದ ಡಾ . ದ್ವಿತಿ, ಶಿಬಿರಾಧಿಕಾರಿ ದೇವಿಪ್ರಸಾದ್ ಸುವರ್ಣ, ಹಿರಿಯ ನವಜೀವನ ಸಮಿತಿ ಸದಸ್ಯರಾದ ಮೋಹನ್ ಉಪಸ್ಥಿತರಿದ್ದು ಶುಭ ಹಾರೈಸಿದರು.
ಶಿಬಿರಕ್ಕೆ ಸೇರಿ ಪಾನಮುಕ್ತರಾದ ನವ ಜೀವನ ಸಮಿತಿ ಸದಸ್ಯರು ತಮ್ಮ ಒಂದು ತಿಂಗಳ ಪಾನಮುಕ್ತ ಜೀವನದ ಅನುಭವಗಳನ್ನು ಹಂಚಿಕೊಂಡರು. ಮದ್ಯವರ್ಜನ ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ವಲಯ ಮೇಲ್ವಿಚಾರಕಿ ಯಶೋಧ ಸ್ವಾಗತಿಸಿ , ಜನಜಾಗೃತಿ ಮೇಲ್ವಿಚಾರಕ ನಿತೇಶ್ ಕೆ ನಿರೂಪಿಸಿ ವಂದಿಸಿದರು.












