26.4 C
ಪುತ್ತೂರು, ಬೆಳ್ತಂಗಡಿ
September 9, 2026
Uncategorizedಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎಸ್.ಕೆ.ಡಿ.ಆರ್.ಡಿ.ಪಿ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಹಾಕಿದ್ದ ರಿಟ್ ಅರ್ಜಿ ವಜಾ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (SKDRDP) ವಿರುದ್ಧ ರಂಜನ್ ರಾವ್ ಯೆರ್ಡೂರ್ ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ರಿಟ್ ಅರ್ಜಿಯನ್ನು ರಂಜನ್ ರಾವ್ ಯೆರ್ಡೂರ್ SKDRDP ಸಂಸ್ಥೆಯು ಕಾನೂನುಬಾಹಿರವಾಗಿ ಬಡ್ಡಿ ದಂಧೆ ನಡೆಸುತ್ತಿದೆ, ಮನಿ ಲೆಂಡರ್ಸ್ ಕಾಯ್ದೆ ಉಲ್ಲಂಘಿಸುತ್ತಿದೆ ಮತ್ತು ವಂಚನೆ (IPC 420) ಎಸಗುತ್ತಿದೆ ಎಂದು ಹಾಕಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ.

ಪ್ರಕರಣದ ವಿವರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಅನೇಕ ಆರೋಪಗಳನ್ನು ಮಾಡಿ. ಖಾಸಗಿ ಕೇಸ್‌ನ್ನು ಬೆಳ್ತಂಗಡಿಯ ಪ್ರಥಮ ದರ್ಜೆ ನ್ಯಾಯಾಲಯದಲ್ಲಿ ಹಾಕಲಾಗಿತ್ತು. ಮಾನ್ಯ ನ್ಯಾಯಾಲಯವು ಈ ಅರ್ಜಿಯನ್ನು ತಿರಸ್ಕರಿಸಿದಾಗ, ಪರಿಷ್ಕರಣೆಗಾಗಿ ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ದೂರುದಾರರು ದಾವೆಯನ್ನು ಹೂಡಿದರು. ನಂತರ ಈ ವಿಚಾರಕ್ಕೆ ಸಂಬಂಧಿಸಿದಂತೆ, ಗ್ರಾಮಾಭಿವೃದ್ಧಿ ಯೋಜನೆಯು ಕರ್ನಾಟಕದ ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ಅರ್ಜಿಯನ್ನು (CRL.P) ಸಲ್ಲಿಸಲಾಯಿತು. ಮಾನ್ಯ ಉಚ್ಚ ನ್ಯಾಯಾಲಯವು ಈ ಕೇಸನ್ನು ಕೂಲಂಕುಷವಾಗಿ ಪರಿಶೀಲಿಸಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮೀಣ ಪ್ರದೇಶಗಳಲ್ಲಿ ಸ್ವಸಹಾಯ ಸಂಘಗಳನ್ನು ರಚಿಸಿ, ಬ್ಯಾಂಕುಗಳಿಂದ ಸಾಲ ಸೌಲಭ್ಯಗಳನ್ನು ದೊರಕಿಸಿಕೊಡುವುದು ಒಂದು ಆರ್ಥಿಕ ಸೇರ್ಪಡೆಯ ಅಂಗವಾಗಿ ಕೈಗೊಳ್ಳಲಾಗುತ್ತಿದೆ ಎನ್ನುವ ಸತ್ಯಾಂಶವನ್ನು ಯೋಜನೆಯ ಪರವಾಗಿ ರಾಜ್ಯದ ಹೆಸರಾಂತ ನ್ಯಾಯವಾದಿಗಳಾದ ಶ್ರೀ ಪಿ.ಪಿ.ಹೆಗ್ಡೆ ಇವರು ವಾದ ಮಂಡಿಸಿದ್ದರು. ಅಲ್ಲದೇ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಈ ಸಂಸ್ಥೆಯನ್ನು ಒಂದು ಚಾರಿಟೇಬಲ್ ಟ್ರಸ್ಟ್ ಆಗಿ ಮಾಡಿ. ಇದರ ಮೂಲಕ ಅನೇಕ ಸಮಾಜ ಸೇವೆಗಳನ್ನು ಕೈಗೊಳ್ಳುತ್ತಿದ್ದಾರೆ. ಗ್ರಾಮಾಭಿವೃದ್ಧಿ ಯೋಜನೆಯ ಈ ಸಮಾಜ ಸೇವಾ ಕಾರ್ಯಕ್ರಮಗಳ ಯಶಸ್ಸನ್ನು ಸಹಿಸದ ದೂರುದಾರರು ದುರುದ್ದೇಶದಿಂದ ಈ ಸುಳ್ಳು ಆರೋಪಗಳನ್ನು ಮಾಡಿರುತ್ತಾರೆಂದು ವಾದಿಸಿದರು. ಧರ್ಮಸ್ಥಳ ಸಂಸ್ಥೆಗಳ ವಿರುದ್ಧ ನಿರಂತರವಾಗಿ ಸುಳ್ಳು ಆರೋಪಗಳನ್ನು ಮಾಡುವುದು ದೂರುದಾರರಿಗೆ ಹವ್ಯಾಸವಾಗಿದೆ ಎಂಬುದನ್ನು ಮಾನ್ಯ ಉಚ್ಚ ನ್ಯಾಯಾಲಯಕ್ಕೆ ತಿಳಿಸಲಾಯಿತು. ಮಾನ್ಯ ಉಚ್ಚ ನ್ಯಾಯಾಲಯವು ಸತ್ಯಾಂಶಗಳನ್ನು ಗಮನಿಸಿ, ಗ್ರಾಮಾಭಿವೃದ್ಧಿ ಯೋಜನೆಯು ಹಾಕಿದ ಅರ್ಜಿಯನ್ನು ಪುರಸ್ಕರಿಸಿ, ಕೆಳ ನ್ಯಾಯಾಲಯದಲ್ಲಿ ನೀಡಿದ ಆದೇಶವನ್ನು ರದ್ದುಗೊಳಿಸಿರುತ್ತದೆ. ಇದರಿಂದ ರಂಜನ್ ರಾವ್ ಯರ್ಡೂರು ಇವರಿಗೆ ತೀವ್ರ ಮುಖಭಂಗವಾಗಿರುತ್ತದೆ. ಮಾನ್ಯ ಉಚ್ಚ ನ್ಯಾಯಾಲಯವು ನೀಡಿದ ತೀರ್ಪನ್ನು ಪ್ರಶ್ನಿಸಿ, ದಿನಾಂಕ 23.04.2026 ರಂದು ದೂರುದಾರ ರಂಜನ್ ರಾವ್ ಯರ್ಡೂರು ಇವರು ದೇಶದ ಸರ್ವೋಚ್ಚ ನ್ಯಾಯಾಲಯವಾದ ಸುಪ್ರಿಂ ಕೋರ್ಟ್‌ಗೆ ಮೇಲ್ಮನವಿಯನ್ನು (ವಿಶೇಷ ಅರ್ಜಿಯನ್ನು ಕೇಸ್ ನಂಬ್ರ : SPL 010752/2026) ಸಲ್ಲಿಸಿರುತ್ತಾರೆ.

ಈ ಅರ್ಜಿಯ ಕುರಿತಾಗಿ, ಭಾರತದ ಸರ್ವೋಚ್ಚ ನ್ಯಾಯಾಲಯವು ದಿನಾಂಕ 8.9.2026ರಂದು ದೂರುದಾರರ ಈ ಮನವಿಯನ್ನು ಆಲಿಸಲಾಯಿತು. ಆದರೆ ದೂರುದಾರರು ನೀಡಿದ ಈ ದೂರು ಆಧಾರರಹಿತವಾಗಿರುವುದನ್ನು ಮನಗಂಡು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಕರಿಸಿರುತ್ತದೆ. ಗ್ರಾಮಾಭಿವೃದ್ಧಿ ಯೋಜನೆಯ ಪರವಾಗಿ ಇಲ್ಲಿಯೂ ಪ್ರಸಿದ್ದ ನ್ಯಾಯವಾದಿ ಶ್ರೀ ಪಿ.ಪಿ. ಹೆಗ್ಡೆ ಇವರು ಸೇವೆ ಸಲ್ಲಿಸಿದರು. ಒಂದು ಶ್ರೇಷ್ಠ ಸೇವಾ ಸಂಸ್ಥೆಯ ವಿರುದ್ಧ ಮಾಡಿರುವ ಸುಳ್ಳು ಆರೋಪಗಳನ್ನು ಪ್ರಾಥಮಿಕ ಹಂತದಲ್ಲೇ ತಿರಸ್ಕರಿಸಿದ ದೇಶದ ಮಾನ್ಯ ಸರ್ವೋಚ್ಚ ನ್ಯಾಯಾಲಯವು ನೀಡಿದ ಈ ತೀರ್ಪು ಒಂದು ಐತಿಹಾಸಿಕ ತೀರ್ಪು ಆಗಿರುತ್ತದೆ.

Related posts

ಗಡಾಯಿಕಲ್ಲು ಪ್ರವಾಸಿ ತಾಣಕ್ಕೆ ರೋಪ್ ವೇ ನಿರ್ಮಾಣಕ್ಕೆ ಹರೀಶ್ ಕುಮಾರ್ ಒತ್ತಾಯ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭೇಟಿ

Suddi Udaya

ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಕರಿಮಣೇಲಿನ ಯುವತಿ ನಾಪತ್ತೆ: ಪೊಲೀಸ್ ದೂರು ದಾಖಲು

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಅಕ್ರಮ ಮರ ಕಡಿತಲೆ ಪ್ರಕರಣ: ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹೆಚ್.ಎನ್. ಅಮಾನತು

Suddi Udaya
error: Content is protected !!