32.1 C
ಪುತ್ತೂರು, ಬೆಳ್ತಂಗಡಿ
September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ನೇರ್ತನೆ ರಸ್ತೆ; ಸ್ಥಳೀಯರಿಂದ ಶ್ರಮದಾನದ ಮೂಲಕ ದುರಸ್ತಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನೇರ್ತನೆ ರಸ್ತೆ ಮಳೆಗಾಲದಲ್ಲಿ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ವಾಹನ ಸಂಚಾರವೇ ಅಸಾಧ್ಯವಾದ ಸ್ಥಿತಿ ನಿರ್ಮಾಣವಾಗಿದ್ದು ಮಾಜಿ ಗ್ರಾ.ಪಂ‌ ಸದಸ್ಯ ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಟಿ.ವಿ ದೇವಸ್ಯ ಅವರ ನೇತೃತ್ವದಲ್ಲಿ ಗ್ರಾಮಸ್ಥರು ಸೆ.6 ರಂದು ಶ್ರಮದಾನದ ಮೂಲಕ ರಸ್ತೆ ದುರಸ್ತಿ ಮಾಡಿದರು.

ಮಳೆ ಕಡಿಮೆಯಾದರೂ ಗ್ರಾಮಪಂಚಾಯತು ಅಡಳಿತ ಕನಿಷ್ಟ ದುರಸ್ತಿಗೂ ಮುಂದಾಗಿರಲಿಲ್ಲ ಈ ಹಿನ್ನಲೆಯಲ್ಲಿ ಇದೀಗ ಸ್ಥಳೀಯರ ನೇತೃತ್ವದಲ್ಲಿ ರಸ್ತೆಯ ದುರಸ್ತಿ ಕಾರ್ಯವನ್ನು ಮಾಡಲಾಗಿದೆ. ತಮ್ಮದೇ ಖರ್ಚಿನಲ್ಲಿ ಕಲ್ಲಿನ ಹುಡಿಯನ್ನು ತಂದು ಸುಮಾರು ಎರಡು ಕಿ.ಮೀ‌ ವರೆಗೆ ರಸ್ತೆಯಲ್ಲಿ ಬಿದ್ದಿದ್ದ ಹೊಂಡಗಳನ್ನು ಮುಚ್ಚುವ ಕಾರ್ಯ ಮಾಡಿದ್ದಾರೆ.
ಸ್ಥಳೀಯ ಮುಖಂಡರುಗಳಾದ ಸದಾಶಿವ, ತೋಮಸ್ ಅಬ್ರಹಾಂ ಜೇಮ್ಸ್ ಹಾಗೂ ಸ್ಥಳೀಯ ಜನರೆಲ್ಲರೂ‌ ಸೇರಿ ಶ್ರಮದಾನದ ಮೂಲಕ ರಸ್ತೆಯನ್ನು ಸಂಚಾರ ಯೋಗ್ಯವಾಗಿಸಿದರು‌ ಕೆಲವು ವರ್ಷಗಳ‌ ಹಿಂದೆ ರಸ್ತೆ ಈ ರಸ್ತೆಯ ಕಾಂಕ್ರಿಟೀಕರಣಕ್ಕೆಂದು ಜಲ್ಲಿ ತಂದು ಹಾಕಿದ್ದರೂ ಕಾಮಗಾರಿ ನಡೆದೆ‌ ಇರಲಿಲ್ಲ‌ ಈ ಮಳೆಗಾಲದಲ್ಲಂತೂ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿತ್ತು. ಈ‌ ಹಿನ್ನಲೆಯಲ್ಲಿ ಸ್ಥಳೀಯರು ಇದೀಗ ಶ್ರಮದಾನ ನಡೆಸಿದ್ದಾರೆ.

Related posts

ಶಿಬರಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಮಹಿಳಾ ಮೀಸಲಾತಿಯನ್ನು ದುರ್ಬಳಕೆ ಮಾಡಿಕೊಂಡು, ಕ್ಷೇತ್ರ‌ ಪುನರ್ ವಿಂಗಡನೆ ಮೂಲಕ ಅಧಿಕಾರ ಹಿಡಿಯಲು ಯತ್ನಿಸಿದ ಬಿಜೆಪಿಗೆ ಮುಖಭಂಗ- ರಕ್ಷಿತ್ ಶಿವರಾಂ

Suddi Udaya

ಆರ್‌ಎಸ್‌ಎಸ್ ಮುಖಂಡ ಮೋಹನ್ ರಾವ್ ಕಲ್ಮಂಜ ರವರನ್ನು ಭೇಟಿ ಮಾಡಿದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಸುಲ್ಕೇರಿಮೊಗ್ರು: ದರ್ಖಾಸು ಐರಿನ್ ಡಿಸೋಜರವರ ಮನೆ ಹಿಂಬದಿ ಗುಡ್ಡ ಕುಸಿತ: ಗ್ರಾ.ಪಂ. ಅಧಿಕಾರಿಗಳ ಭೇಟಿ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya
error: Content is protected !!