28.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿ

ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರ ಉಜಿರೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ.


ಉಜಿರೆ:ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರ ಉಜಿರೆ.ಶ್ರೀ ಗಣೇಶ ಸೇವಾ ಟ್ರಸ್ಟ್ ರಿ) ಸೇವಾ ಘಟಕ ಶಕ್ತಿನಗರ ಮಂಗಳೂರು ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ಸೆ .9 ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರ ಉಜಿರೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.


ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಅಧ್ಯಕ್ಷರಾದ ಲ! ರಘುರಾಮ್ ಶೆಟ್ಟಿ ಸಾಧನ ಇವರು ಉದ್ಘಾಟಿಸಿದರು ಅಧ್ಯಕ್ಷತೆಯನ್ನು ಶ್ರೀ ಮಹಾಬಲ ಮಾರ್ಲ ಅಧ್ಯಕ್ಷರು ಶ್ರೀ ಗಣೇಶ ಸೇವಾ ಟ್ರಸ್ಟ್ ಮಂಗಳೂರು ಇವರು ವಹಿಸಿದರು.


ಸಂಪನ್ಮೂಲ ವ್ಯಕ್ತಿಯಾಗಿ ಡಾ ಮಹಾವೀರ ಜೈನ್ ಇಚಿಲಾಂಪಾಡಿ ಕನ್ನಡ ಉಪನ್ಯಾಸಕರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜ್ ಉಜಿರೆ ಇವರು ವಿಕಲಚೇತನ ಮಕ್ಕಳಲ್ಲಿ ಶಿಕ್ಷಕರ ಮಹತ್ವ ಇದರ ಕುರಿತು ಮಾತನಾಡಿದರು.


ಮುಖ್ಯ ಅತಿಥಿಗಳಾಗಿ ಲ! ನಾಣ್ಯಪ್ಪ ನಾಯ್ಕ್ ಕೋಶಾಧಿಕಾರಿ ಲಯನ್ಸ್ ಕ್ಲಬ್ ಬೆಳ್ತಂಗಡಿ ಮತ್ತು ಡಾ! ವಸಂತ್ ಕುಮಾರ್ ಶೆಟ್ಟಿ ಆಡಳಿತ ಅಧಿಕಾರಿ ಸಾನಿಧ್ಯ ಸಮೂಹ ಸಂಸ್ಥೆಗಳು ಮಂಗಳೂರು ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು
ಸಾನಿಧ್ಯದ ಸಲಹಾ ಸಮಿತಿ ಸದಸ್ಯರಾದ ಪ್ರೇಮ ರಾಜ್ ರೋಷನ್ ಸಿಕ್ವೇರಾರು ಡಾ ವಸಂತ್ ಕುಮಾರ್ ಶೆಟ್ಟಿ ಹಾಗೂ ಸಾನಿಧ್ಯ ಕೇಂದ್ರದ ಮೇಲ್ವಿಚಾರಕಿ ಶ್ರೀಮತಿ ಮಲ್ಲಿಕಾ ಇವರನ್ನು ಮತ್ತು ಸಾನಿಧ್ಯ ಕೇಂದ್ರದಲ್ಲಿ ಸೇವೆಯನ್ನು ಸಲ್ಲಿಸುತ್ತಿರುವ ಎಲ್ಲಾ ಶಿಕ್ಷಕರನ್ನು ಹಾಗೂ ಶಿಕ್ಷಕೇತರ ಸಿಬ್ಬಂದಿಗಳನ್ನು ಸನ್ಮಾನಿಸಿ ಉಡುಗೊರೆಗಳನ್ನು ನೀಡಿದರು. ಪ್ರತಿವರ್ಷದಂತೆ ಈ ಸಲವೂ ಕೂಡ ಎಲ್ಲಾ ಶಿಕ್ಷಕರಿಗೆ ಮತ್ತು ಸಿಬ್ಬಂದಿಗಳಿಗೆ ಶ್ರೀ ಗಣೇಶ ಸೇವಾ ಟ್ರಸ್ಟ್ ವತಿಯಿಂದ ಉಡುಗೊರೆಗಳನ್ನು ನೀಡಲಾಯಿತು.
ಕಾರ್ಯಕ್ರಮದ ವೇದಿಕೆಯಲ್ಲಿ ಅಭಿಯಂತರರುಗಳಾದ ರೋ!ವಿದ್ಯಾಕುಮಾರ್ ಕಾಂಚೋಡು ಮತ್ತು ಶ್ರೀ ನಾಗೇಶ್ ಕುಮಾರ್ ನೆರಿಯ ಇವರನ್ನು ಶ್ರೀ ಗಣೇಶ ಸೇವಾ ಟ್ರಸ್ಟ್ (ರಿ) ಮಂಗಳೂರು ಇವರ ವತಿಯಿಂದ ವಿಶೇಷವಾಗಿ ಸನ್ಮಾನಿಸಲಾಯಿತು.
ಲಯನ್ಸ್ ಕ್ಲಬ್ ಬೆಳ್ತಂಗಡಿ ಇವರ ವತಿಯಿಂದ ಮಕ್ಕಳಿಗೆ ಹಾಗೂ ಎಲ್ಲಾ ಆಹ್ಹಾನಿತರಿಗ ಬೆಳಗಿನ ಉಪಹಾರ ಮತ್ತುಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು.
ಪ್ರೇಮ್ ರಾಜ್ ರೋಷನ್ ಸಿಕ್ವೇರಾ ಸ್ವಾಗತಿಸಿದರು ಶಾಲಾ ಶಿಕ್ಷಕಿ ಶ್ರೀಮತಿ ಅಕ್ಷತಾ ಧನ್ಯವಾದಗಳು ತಿಳಿಸಿದರು ಶ್ರದ್ಧ ವಸಂತ್ ಶೆಟ್ಟಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಗುರುವಾಯನಕೆರೆ: ವರಕಬೆ ಬಳಿ ಕಾರುಗಳು ಹಾಗೂ ಬೈಕ್ ನಡುವೆ ಸರಣಿ ಅಪಘಾತ

Suddi Udaya

ವಾಣಿ ಪ.ಪೂ. ಕಾಲೇಜಿನ ಎನ್‌.ಎಸ್.ಎಸ್‌. ಘಟಕದಿಂದ ಕೋಟಿ ವೃಕ್ಷ ಅಭಿಯಾನ

Suddi Udaya

ಹೊಸ ನಿರೀಕ್ಷೆ ಮೂಡಿಸಿದ ಸಿನೆಮಾ ‘ದಸ್ಕತ್’; ಗ್ರಾಮೀಣ ಭಾಗದ ಸಂಸ್ಕೃತಿ,ಸಂಘರ್ಷ,ಸಂಭ್ರಮದ ಕಥೆ ಹೇಳುವ ದಸ್ಕತ್ ಚಿತ್ರಕ್ಕೆ ಸಿನಿಪ್ರಿಯರಿಂದ ಉತ್ತಮ ಸ್ಪಂದನೆ

Suddi Udaya

ಸುಪ್ರೀಂ ಕೋರ್ಟ್ ನಲ್ಲಿ ರಿಜೆಕ್ಟ್ ಆಗಿತ್ತು ಬುರುಡೆ ಪ್ರಕರಣ: ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪೈಸಾ ಇನ್ಟ್ರೆಸ್ಟ್‌ ಲಿಟಿಗೇಷನ್‌ ಎಂದಿದ್ದ ನ್ಯಾಯಪೀಠ

Suddi Udaya

ಸೆ.23: ಬೆಳ್ತಂಗಡಿ ಸುನ್ನೀ ಕೋ-ಆರ್ಡಿನೇಶನ್ ಸಮಿತಿ ವತಿಯಿಂದ “ಗ್ರ್ಯಾಂಡ್ ಹುಬ್ಬುರ್ರಸೂಲ್ ಮಜ್ಲಿಸ್‌” ವಿಶೇಷ ಮೌಲಿದ್ ಪಾರಾಯಣ ಹಾಗೂ ಬುರ್ದಾ ಕಾರ್ಯಕ್ರಮ

Suddi Udaya

ಬಂಟರ ಯಾನೆ ನಾಡವರ ಮಾತೃ ಸಂಘ ಸಂಚಾಲಕರಾಗಿ ಜಯರಾಮ ಭಂಡಾರಿ ಹಾಗೂ ಸಹ ಸಂಚಾಲಕರಾಗಿ ಕಿರಣ್ ಕುಮಾರ್ ಶೆಟ್ಟಿ : ನಾಮ ನಿರ್ದೇಶನ ನಿರ್ದೇಶಕರಾಗಿ ಜಯಂತ ಶೆಟ್ಟಿ ಹಾಗೂ ಅಜಿತ್ ಜಿ. ಶೆಟ್ಟಿ, ಪುಷ್ಪರಾಜ್ ಶೆಟ್ಟಿ ಆಯ್ಕೆ

Suddi Udaya
error: Content is protected !!