28.2 C
ಪುತ್ತೂರು, ಬೆಳ್ತಂಗಡಿ
September 9, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತಹಶೀಲ್ದಾರ್ ಆದೇಶದ ಬೆನ್ನಲ್ಲೇ ಅನಧಿಕೃತ ಕಟ್ಟಡ ತೆರವು

ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಪಡ್ಲಾಡಿಯ ನೇತಾಜಿ ಬಡಾವಣೆ ಪಕ್ಕದ ಸರ್ಕಾರಿ 116/1 ರಲ್ಲಿ 0.05 ಎಕ್ರರೆಯಲ್ಲಿ ಗ್ರಂಥಾಲಯಕ್ಕೆ ಮೀಸಲಿಟ್ಟ ಜಾಗದಲ್ಲಿ ನಿರ್ಮಿಸಲಾಗಿದ್ದ ಅನಧಿಕೃತ ಮನೆ ಕಟ್ಟಡವನ್ನು ಬೆಳ್ತಂಗಡಿ ತಹಶೀಲ್ದಾರ್ ಅವರ ಆದೇಶದ ಮೇರೆಗೆ ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ.

ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಿಸಿರುವ ಸೂರಪ್ಪ ಮತ್ತು ರಾಜು ಮೇಸ್ತ್ರಿ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಸ್ಥಳ ಪರಿಶೀಲನೆ ನಡೆಸಿ ಕಟ್ಟಡ ತೆರವುಗೊಳಿಸುವಂತೆ ಆದೇಶಿಸಿದ್ದರು. ಅದರಂತೆ ಸೆ.4ರಂದು ಅಧಿಕಾರಿಗಳು ಕಟ್ಟಡ ತೆರವುಗೊಳಿಸಲು ಸ್ಥಳಕ್ಕೆ ಆಗಮಿಸಿದ್ದರು. ಈ ವೇಳೆ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಸುಧಾಕರ್ ಬಿ.ಎಲ್. ಹಾಗೂ ರಾಜು ಮೇಸ್ತ್ರಿ ಮಗ ಸುರೇಶ್ ಅವರು ಮೂರು ದಿನಗಳೊಳಗೆ ಕಟ್ಟಡವನ್ನು ತಾವೇ ತೆರವುಗೊಳಿಸುವುದಾಗಿ ಅಧಿಕಾರಿಗಳಿಗೆ ಲಿಖಿತವಾಗಿ ತಿಳಿಸಿ ಕಾಲಾವಕಾಶ ಕೋರಿದ್ದರು.

ನಿಗದಿತ ಅವಧಿಯಲ್ಲಿ ಕಟ್ಟಡ ತೆರವುಗೊಳಿಸದಿದ್ದಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಲ್ಲಿ ಮನವಿ ಮಾಡಿದ್ದರು.ಅದರಂತೆ ಇದೀಗ ಬೆಳ್ತಂಗಡಿ ತಹಶೀಲ್ದಾರ್ ಎಸ್.ಎನ್.ನರಗುಂದ, ಕಂದಾಯ ನಿರೀಕ್ಷಕ ರಾಜು ಲಮಣಿ, ಲಾಯಿಲ ಗ್ರಾಮ ಪಂಚಾಯತ್ ಪಿಡಿಒ ತಾರಾನಾಥ್ ನಾಯ್ಕ್, ಗ್ರಾಮ ಆಡಳಿತ ಅಧಿಕಾರಿ ರನಿತಾ, ಗ್ರಾಮ ಸಹಾಯಕ ಸತೀಶ್ ಅವರ ಮುತುವರ್ಜಿಯಿಂದ ಅನಧಿಕೃತ ಕಟ್ಟಡವನ್ನು ಸಂಪೂರ್ಣವಾಗಿ ಅಕ್ರಮ ಕಟ್ಟಡ ಮಾಲೀಕರು ತೆರವುಗೊಳಿಸಿ ಕಂದಾಯ ಇಲಾಖೆಯ ಕಾನೂನು ಪಾಲನೆ ಮಾಡಿದ್ದಾರೆ‌.

Related posts

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಒತ್ತಡ ನಿರ್ವಹಣೆ” ಕಾರ್ಯಾಗಾರ

Suddi Udaya

ಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ಶಿಕ್ಷಣ:ಎಕ್ಸೆಲ್ ಶಾಲೆಗಳಲ್ಲಿ ಆರನೆಯ ತರಗತಿಯ ಹಂತದಿಂದಲೇ ಮೆಡಿಕಲ್ ಹಾಗೂ ಐಐಟಿ ಫೌಂಡೇಶನ್ ಕೋರ್ಸ್:ಮಧ್ಯಾಹ್ನದ ಊಟದ ಜೊತೆಗೆ ತಾಲೂಕಿನ ಎಲ್ಲಾ ಭಾಗಗಳಿಂದ ಸ್ಕೂಲ್ ಬಸ್ ವ್ಯವಸ್ಥೆ: ಸುಮಂತ್ ಕುಮಾರ್ ಜೈನ್

Suddi Udaya

ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಸಿಕ ಸಭೆ, ಬೆಳ್ತಂಗಡಿಯಲ್ಲಿ ಒಂದು ವೃತ್ತಕ್ಕೆ ವಸಂತ ಬಂಗೇರರ ಹೆಸರಿಟ್ಟು ಪುತ್ಥಳಿ ನಿರ್ಮಿಸಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ನಿರ್ಣಯ

Suddi Udaya

ಮುಂಡಾಜೆ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ 5 ನೇ ಬಾರಿ ಆಯ್ಕೆ : ಉಪಾಧ್ಯಕ್ಷರಾಗಿ ಜಯಂತ ಗೌಡ ಎಂ.ಅವಿರೋಧ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಚಿವ ಎನ್.ಎಸ್. ಬೋಸರಾಜು ಭೇಟಿ

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಲೋಕ ಅದಾಲತ್

Suddi Udaya
error: Content is protected !!