29.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಕ್ಷಕರ ಸೇವೆ ಗುರುತಿಸಿ ಗೌರವಿಸಿದ ಬೆಳ್ತಂಗಡಿ ರೋಟರಿ ಕ್ಲಬ್

ಬೆಳ್ತಂಗಡಿ: ಶಿಕ್ಷಕರ ದಿನಾಚರಣೆ ಅಂಗವಾಗಿ ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಆನ್ಸ್ ಕ್ಲಬ್ ವತಿಯಿಂದ ತಾಲೂಕಿನ ವಿವಿಧೆಡೆ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನು ಗುರುತಿಸಿ ಗೌರವಿಸುವ ಮೂಲಕ ಅರ್ಥಪೂರ್ಣವಾಗಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

ರೋಟರಿ ಕ್ಲಬ್ ಅಧ್ಯಕ್ಷ ಶ್ರೀಧರ ಕೆ.ವಿ. ಹಾಗೂ ಆನ್ ಗಾಯತ್ರೀ ಶ್ರೀಧರ್ ಅವರು ಎಸ್‌ಡಿಎಂ ಪಿಜಿ ಕಾಲೇಜಿನ ಗೀತಾ ವಸಂತ್, ಎಸ್‌ಡಿಎಂ ಅನುದಾನಿತ ಪ್ರೌಢಶಾಲೆಯ ಶ್ರೀರಾಮ್ ಎನ್., ಮಾಯಾ ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಕಾವ್ಯ ಹಾಗೂ ಎಸ್‌ಡಿಎಂ ಅನುದಾನಿತ ಪ್ರೌಢಶಾಲೆ ಉಜಿರೆಯ ಚಂದ್ರಶೇಖರ್ ಅವರನ್ನು ಗೌರವಿಸಿದರು.

ರೊ. ಬಿ.ಕೆ. ಧನಂಜಯ ರಾವ್ ಹಾಗೂ ಆನ್ಸ್ ಕ್ಲಬ್ ಅಧ್ಯಕ್ಷೆ ಆನ್ ರಾಜಶ್ರೀ ರಾವ್ ಅವರು ಕರ್ನೋಡಿ ಶಾಲೆಯಲ್ಲಿ 29 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಲಲಿತಾ ಅವರನ್ನು ಗೌರವಿಸಿದರು.

ಅದೇ ರೀತಿ ಆನ್ ಡಾ. ಆಶಾ ರಾಘವೇಂದ್ರ ಹಾಗೂ ಆನ್ ಡಾ. ವಿನಯಾ ಕಿಶೋರ್ ಅವರು ಗುರುವಾಯನಕೆರೆಯಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನು ಅವರವರ ನಿವಾಸಕ್ಕೆ ತೆರಳಿ ಗೌರವಿಸಿದರು. ವಿದ್ವತ್ ಕಾಲೇಜಿನ ಪಾರ್ವತೀಶ್ವರ ರಾವ್, ಎಸ್‌ಡಿಎಂ ಕಾಲೇಜು ಉಜಿರೆಯ ವಂದನಾ ಜೈನ್, ಸರಕಾರಿ ಪ್ರೌಢಶಾಲೆ ಬೆಳ್ತಂಗಡಿಯ ಪೂರ್ಣಿಮಾ ಮೋಹನ್, ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕಿ ಸಂಧ್ಯಾ, ವಾಣಿ ಕಾಲೇಜು ಬೆಳ್ತಂಗಡಿಯ ಪ್ರಾಧ್ಯಾಪಕ ಮಹಾಬಲ ಗೌಡ, ವಾಣಿ ಕಾಲೇಜಿನ ಪ್ರಾಧ್ಯಾಪಕಿ ಮೀನಾಕ್ಷಿ ಎನ್., ಗರ್ಡಾಡಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಬಬೀಂದ್ರ, ಎಸ್‌ಡಿಎಂ ಇಂಗ್ಲೀಷ್ ಮೀಡಿಯಂ ಶಾಲೆಯ ಸೌಮ್ಯ ಪಿ., ಪದ್ಮಂಜ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಸುಮತಿ ಪಿ.ಎನ್. ಹಾಗೂ ಮೈರೋಲ್ತಡ್ಕ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಶ್ರೀಧರ ಅವರನ್ನು ಗೌರವಿಸಲಾಯಿತು.

Related posts

ನಾಳೆ(ಜ.11): ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ ವಿಶೇಷ ಕಾರ್ಯಾಗಾರ:ಎಕ್ಸೆಲ್ ಬೆಳಕು ಫೌಂಡೇಶನ್ಉಚಿತ ಶಿಕ್ಷಣ ಯೋಜನೆ ಬಗ್ಗೆ ವಿಸ್ಕೃತ ಮಾಹಿತಿ ನೀಡಲಿದ್ದೇವೆ: ಸುಮಂತ್ ಕುಮಾರ್ ಜೈನ್:ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ,ಕಾರ್ಯಾಗಾರವೂ ಮಧ್ಯಾಹ್ನ 2:00 ರಿಂದ ಸಂಜೆ 4:30 ರ ವರೆಗೆ ಜರುಗಲಿದೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

Suddi Udaya

ಅಂಡಿಂಜೆ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮಸಭೆ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಉಪ ಚುನಾವಣೆ: ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಯಾಗಿ ಕುಸುಮ ಈಶ್ವರ ಗೌಡ ಕಣಕ್ಕೆ

Suddi Udaya

ಶಿಬಾಜೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಯಕ್ಷ ಶಿಕ್ಷಣ ಯೋಜನೆಯ ವತಿಯಿಂದ ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಯಕ್ಷನಾಟ್ಯ ತರಬೇತಿ ಉದ್ಘಾಟನೆ

Suddi Udaya
error: Content is protected !!