29.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಕಕ್ಯಪದವು; ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್ (ರಿ).ನಿಂದ ನಡೆಸಲ್ಪಡುವ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿಪೂರ್ವ ವಿಭಾಗದ ರಾಷ್ಟ್ರೀಯ ಸೇವಾ ಯೋಜನಾ (NSS) ಘಟಕ ಹಾಗೂ ಪದವಿ ವಿಭಾಗದ ಎನ್.ಎಸ್.ಎಸ್. ಕ್ಲಬ್ ನ ವತಿಯಿಂದ ಸಂಸ್ಥೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ಆವರಣ, ಆಟದ ಮೈದಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛಗೊಳಿಸಲಾಯಿತು. ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಉತ್ಸಾಹದಿಂದ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು. ಕಸವನ್ನು ಸಂಗ್ರಹಿಸಿ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲಾಯಿತು.

ಈ ಸಂದರ್ಭದಲ್ಲಿ ಸ್ವಚ್ಛತೆ ಕೇವಲ ಒಂದು ದಿನದ ಕಾರ್ಯಕ್ರಮವಾಗಿರದೆ, ಪ್ರತಿಯೊಬ್ಬರ ದೈನಂದಿನ ಜೀವನದ ಭಾಗವಾಗಬೇಕು ಎಂಬ ಸಂದೇಶವನ್ನು ನೀಡಲಾಯಿತು. ವಿದ್ಯಾರ್ಥಿಗಳು ಸ್ವಚ್ಛತೆಯನ್ನು ಕಾಪಾಡುವ ಹಾಗೂ ಇತರರಲ್ಲಿಯೂ ಜಾಗೃತಿ ಮೂಡಿಸುವ ಪ್ರತಿಜ್ಞೆ ಕೈಗೊಂಡರು.

Related posts

ಬೆಳಾಲು ಗ್ರಾ.ಪಂ ಮಾಜಿ ಸದಸ್ಯ ಅಂಗರಗಂಡ ಯೂಸುಫ್ ನಿಧನ

Suddi Udaya

ಅಂಡಿಂಜೆ ಗ್ರಾ.ಪಂ. ಸದಸ್ಯೆ ಶೋಭಾ ನಾಯ್ಕ್ ಅಸೌಖ್ಯದಿಂದ ನಿಧನ

Suddi Udaya

ಕಾಶಿಪಟ್ಣ ಗ್ರಾಮ ಪಂಚಾಯತ್ ಪ್ರಥಮ ಹಂತದ ಗ್ರಾಮಸಭೆ, ವಿವಿಧ ಇಲಾಖಾಧಿಕಾರಿಗಳಿಂದ ಇಲಾಖಾ ಮಾಹಿತಿ

Suddi Udaya

ಧರ್ಮಸ್ಥಳದಲ್ಲಿ “ರಾಜ್ಯಸಭೆಯಲ್ಲಿ ರಾಜರ್ಷಿ” ಕೃತಿ ಬಿಡುಗಡೆ

Suddi Udaya

ಕುತ್ಲೂರು ಸ.ಉ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭ

Suddi Udaya

ಕಾರಿಂಜ ಶ್ರೀ ವನಶಾಸ್ತಾರ ಮತ್ತು ವೀರಭದ್ರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಉಗ್ರಾಣ , ಕಾರ್ಯಾಲಯ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!