29.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.12: ಬೆಳ್ತಂಗಡಿಯಲ್ಲಿ ಮುಳಿಯ ಜ್ಯುವೆಲ್ಸ್ ವತಿಯಿಂದ ಕೃಷ್ಣ ವೇಷ ಸ್ಪರ್ಧೆ

ಬೆಳ್ತಂಗಡಿ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ಸೆ. 12ರಂದು ಬೆಳ್ತಂಗಡಿ ಶೋರೂಂನಲ್ಲಿ ‘ಕೃಷ್ಣ ವೇಷ ಸ್ಪರ್ಧೆ’ ಆಯೋಜಿಸಲಾಗಿದೆ.

ಮಕ್ಕಳಲ್ಲಿ ಭಾರತೀಯ ಸಂಸ್ಕೃತಿ, ಸಂಪ್ರದಾಯ ಹಾಗೂ ಶ್ರೀಕೃಷ್ಣನ ಕುರಿತಾದ ಭಕ್ತಿಭಾವವನ್ನು ಬೆಳೆಸುವ ಉದ್ದೇಶದಿಂದ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ಸ್ಪರ್ಧೆಯಲ್ಲಿ ಮೂರು ವಿಭಾಗಗಳಲ್ಲಿ ಮಕ್ಕಳು ಭಾಗವಹಿಸಲಿದ್ದಾರೆ.

0ರಿಂದ 3 ವರ್ಷದ ಮಕ್ಕಳಿಗೆ ‘ಮುದ್ದು ಕೃಷ್ಣ’, 4ರಿಂದ 7 ವರ್ಷದ ಮಕ್ಕಳಿಗೆ ‘ಬಾಲ ಕೃಷ್ಣ’ ಹಾಗೂ 8ರಿಂದ 12 ವರ್ಷದ ಮಕ್ಕಳಿಗೆ ‘ರಾಧಾ ಕೃಷ್ಣ’ ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ.

ಪ್ರತಿ ವಿಭಾಗದಲ್ಲಿಯೂ ವಿಜೇತರನ್ನು ಆಯ್ಕೆ ಮಾಡಿ ಆಕರ್ಷಕ ಬಹುಮಾನ ಹಾಗೂ ಪ್ರಮಾಣಪತ್ರಗಳನ್ನು ವಿತರಿಸಲಾಗುವುದು. ಶ್ರೀಕೃಷ್ಣನ ವೇಷದಲ್ಲಿ ಮುದ್ದು ಮಕ್ಕಳು ಕಂಗೊಳಿಸಲಿರುವ ಈ ಸ್ಪರ್ಧೆ ಜನ್ಮಾಷ್ಟಮಿ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಲಿದೆ.

ಸ್ಪರ್ಧೆಯಲ್ಲಿ ಭಾಗವಹಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ 9902349916 / 8792530916 ಸಂಪರ್ಕಿಸಬಹುದು. ಕಾರ್ಯಕ್ರಮ ಮುಳಿಯ ಗೋಲ್ಡ್ & ಡೈಮಂಡ್ಸ್, ಬೆಳ್ತಂಗಡಿಯಲ್ಲಿ ನಡೆಯಲಿದೆ.

Related posts

ಉಜಿರೆ ಪ್ರೇರಣಾ ಮಹಿಳಾ ಸಂಜೀವಿನಿ ಒಕ್ಕೂಟ ವತಿಯಿಂದ ಸಮಗ್ರ ಕೃಷಿ ಬೇಸಾಯ ಪದ್ಧತಿ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಲೋಕಸಭೆ ಚುನಾವಣೆ ಹಿನ್ನಲೆ: ಬೆಳ್ತಂಗಡಿ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕ‌ರ್ ಮತ್ತು ಪ.ಪಂ. ಮುಖ್ಯಾಧಿಕಾರಿ ರಾಜೇಶ್ ಕೆ. ವರ್ಗಾವಣೆ

Suddi Udaya

ಮಚ್ಚಿನ: ಬಳ್ಳಮಂಜದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯ ಬಾಲಕ ಬಾಲಕಿಯರ ನೂತನ ಶೌಚಾಲಯದ ಹಸ್ತಾಂತರ

Suddi Udaya

ಶಿಶಿಲ : ಮೀನಗಂಡಿ ನಿವಾಸಿ ಜಲಜಾಕ್ಷಿ ಆತ್ಮಹತ್ಯೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಯಕ್ಷಗಾನ ತರಬೇತಿ ತರಗತಿಗೆ ಚಾಲನೆ

Suddi Udaya
error: Content is protected !!