ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ಎಐಸಿಸಿ ನೇಮಕ ಮಾಡಲಾಗಿದೆ. ಸಂಸದ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಪ್ರಕಟಣೆ ಹೊರಡಿಸಿದ್ದು, ನೇಮಕಾತಿ ತತ್ ಕ್ಷಣದಿಂದಲೇ ಜಾರಿಗೆ ಬರಲಿದೆ.
‘ಸಂಘಟನ್ ಸೃಜನ ಅಭಿಯಾನ’ದ ಭಾಗವಾಗಿ ಈ ನೇಮಕಾತಿಗಳನ್ನು ಮಾಡಲಾಗಿದೆ. ಈ ಅಭಿಯಾನದಡಿ ಪ್ರತಿ ಜಿಲ್ಲೆಗೆ ನಿಯೋಜಿಸಲಾದ ಎಐಸಿಸಿ ವೀಕ್ಷಕರು (Observers) ವಿವರವಾದ ಪರಿಶೀಲನೆ ನಡೆಸಿ, ಪಕ್ಷದ ಪದಾಧಿಕಾರಿಗಳು ಹಾಗೂ ಇತರ ಸಂಬಂಧಿತರೊಂದಿಗೆ ಸಮಾಲೋಚನೆ ನಡೆಸಿ, ಸಮಗ್ರ ವರದಿಗಳನ್ನು ಸಲ್ಲಿಸಿದ್ದಾರೆ.
ಈ ವರದಿಗಳನ್ನು ಸಲ್ಲಿಸಿದ ಬಳಿಕ, ಒಬ್ಬೊಬ್ಬರೊಂದಿಗೆ ವೈಯಕ್ತಿಕವಾಗಿ ಸಮಾಲೋಚನೆ ನಡೆಸಲಾಗುತ್ತದೆ ಮತ್ತು ಹಿರಿಯ ನಾಯಕರೊಂದಿಗೂ ಮಾತುಕತೆ ನಡೆಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.












