32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ನೆಟ್ ಬಾಲ್ ಪಂದ್ಯಾಟ

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ನೆಟ್ ಬಾಲ್ ಪಂದ್ಯಾಟ ಸೆ. 9 ರಂದು ಜರಗಿತು.

ಪಂದ್ಯಾಟವನ್ನು ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಪ್ರಮೀಳಾ ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಿಂಧೂರ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷ ನಿಶಾ ಬನಂದೂರು ಕ್ರೀಡಾ ಪಟುಗಳಿಗೆ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಮಾತನಾಡಿ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಮಾನಸಿಕ ಮತ್ತು ದೈಹಿಕ ಬೆಳವಣಿಗೆ ಹೊಂದಬಹುದು ಎಂದು ತಿಳಿಸಿದರು.

ಸಮಾರೋಪ ಸಮಾರಂಭದಲ್ಲಿ ಬೆಳ್ತಂಗಡಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಪ್ರಭಾಕರ್ ಪ್ರಶಸ್ತಿ ವಿತರಿಸಿ, ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಶ್ರೀ ಧ. ಮಂ, ಪ್ರೌಢಶಾಲೆ ಬೆಳಾಲು ಪ್ರಥಮ ಸ್ಥಾನ, ಸರ್ಕಾರಿ ಪ್ರೌಢಶಾಲೆ ಗುರುವಾಯನಕೆರೆ ದ್ವಿತೀಯ ಸ್ಥಾನ, ಬಾಲಕರ ವಿಭಾಗದಲ್ಲಿ ಎಸ್. ಡಿ. ಎಂ ಸೆಕೆಂಡರಿ ಶಾಲೆ ಉಜಿರೆ ಪ್ರಥಮ ಸ್ಥಾನ, ಸರ್ಕಾರಿ ಪ್ರೌಢಶಾಲೆ ಗುರುವಾಯನಕೆರೆ ದ್ವಿತೀಯ ಸ್ಥಾನ ಪಡೆಯಿತು. 14ರ ವಯೋಮಾನ ಬಾಲಕಿಯರ ವಿಭಾಗದಲ್ಲಿ ಎಸ್. ಡಿ. ಎಮ್ ಜನಾರ್ದನ ಶಾಲೆ ಉಜಿರೆ ಪ್ರಥಮ, ಎಸ್. ಡಿ. ಎಂ ಸೆಕೆಂಡರಿ ಶಾಲೆ ಉಜಿರೆ ದ್ವಿತೀಯ, ಬಾಲಕರ ವಿಭಾಗದಲ್ಲಿ ಎಸ್. ಡಿ. ಎಂ. ಸೆಕೆಂಡರಿ ಶಾಲೆ ಉಜಿರೆ ಪ್ರಥಮ, ಎಸ್. ಡಿ. ಎಂ ಜನಾರ್ದನ ಶಾಲೆ ಉಜಿರೆ ದ್ವಿತೀಯ ಬಹುಮಾನ ಪಡೆಯಿತು.

ಶಿಕ್ಷಕರಾದ ಕೃಷ್ಣಾನಂದ ರಾವ್ ಸ್ವಾಗತಿಸಿ, ಶಿಕ್ಷಕರಾದ ಕಿರಣ್ ವಂದಿಸಿದರು. ಸುಮನ್ ಯು.ಎಸ್ ಕಾರ್ಯಕ್ರಮ ನಿರೂಪಿಸಿದರು. ಹಿರಿಯ ದೈಹಿಕ ಶಿಕ್ಷಣ ಶಿಕ್ಷಕರಾದ ವಿಠ್ಠಲ ಬದನಾಜೆ ಮತ್ತು ವೆಂಕಟೇಶ್ ಗುರುವಾಯನಕೆರೆ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಬಾಲಕೃಷ್ಣ ಕೆದಿಲಾಯ ರವರಿಗೆ “ಚೈತನ್ಯ ಸ್ವರೂಪ ಧರ್ಮರತ್ನಾಕರ” ಪ್ರಶಸ್ತಿ

Suddi Udaya

ಎ.29: ಧರ್ಮಸ್ಥಳದಲ್ಲಿ 54ನೇ ಉಚಿತ ಸಾಮೂಹಿಕ ವಿವಾಹ ವೈಭವ

Suddi Udaya

ಉಪ್ಪಿನಂಗಡಿ-ಕುಪ್ಪೆಟ್ಟಿ ಹೆದ್ದಾರಿಯಲ್ಲಿ ಮರಣ ಗುಂಡಿಗಳ ತಾಂಡವ: ದುಸ್ತರಗೊಂಡ ಸಂಚಾರ | ವಾಹನ ಸವಾರರಿಗೆ ತೀವ್ರ ಸಂಕಷ್ಟ: ಸುದ್ದಿ ಉದಯ ಜನಧ್ವನಿ

Suddi Udaya

ಪಡಂಗಡಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಎಸ್‌ಡಿಎಂ ಕಾಲೇಜು: ‘ಬರೋಡಾ ಅಚೀವರ್ಸ್ ಅವಾರ್ಡ್-2026’

Suddi Udaya
error: Content is protected !!