32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಎದುರು ನಿವೃತ್ತ ಸಿಇಒ, ಉಪ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಿಂದ ಧರಣಿ

ಶಿರ್ಲಾಲು: ನಿವೃತ್ತಿಯ ಸಂದರ್ಭದಲ್ಲಿ ದೊರೆಯಬೇಕಾದ ಪಿಎಫ್, ಗ್ರಾಚ್ಯೂಟಿ ಹಾಗೂ ಗಳಿಕೆ ರಜೆಯ ಸಂಬಳವನ್ನು ನೀಡಿಲ್ಲ ಎಂದು ಆರೋಪಿಸಿ ನಿವೃತ್ತ ಸಿಇಒ ಅಮ್ಮಾಜಿ ಕೋಟ್ಯಾನ್ ಹಾಗೂ ನಿವೃತ್ತ ಉಪ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಪ್ರಭಾಕರ್ ಅವರು ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಚೇರಿ ಎದುರು ನ್ಯಾಯಕ್ಕಾಗಿ ಶಾಂತಿಯುತ ಧರಣಿ ಸತ್ಯಾಗ್ರಹವನ್ನು ಸೆ 10ರಂದು ನಡೆಸಿದರು.

ಮಿದುಳಿನ ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿರುವ ಅಮ್ಮಾಜಿ ಕೋಟ್ಯಾನ್ ಅವರು, ತಮ್ಮ ನಿವೃತ್ತಿಯ ಬಳಿಕ ಸಿಗಬೇಕಾದ ಹಣವನ್ನು ಬಿಡುಗಡೆ ಮಾಡಬೇಕು. ಜೀವನಪೂರ್ತಿ ದುಡಿದು ಗಳಿಸಿದ ಹಣಕ್ಕಾಗಿ ಇದೀಗ ಧರಣಿ ನಡೆಸಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅದೇ ರೀತಿ ನಿವೃತ್ತ ಉಪ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಪ್ರಭಾಕರ್ ಅವರು ಹೃದಯದ ತೆರೆದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ನಿವೃತ್ತಿಯ ಬಳಿಕ ತಮಗೆ ದೊರೆಯಬೇಕಾದ ಗ್ರಾಚ್ಯೂಟಿ, ಗಳಿಕೆ ರಜೆಯ ಸಂಬಳ ಹಾಗೂ ಎರಡು ವರ್ಷಗಳ ರಜೆ ವೇತನ ಸೇರಿದಂತೆ ಬಾಕಿ ಇರುವ ಹಣವನ್ನು ನೀಡದೆ ಆಡಳಿತ ಮಂಡಳಿ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ, ನ್ಯಾಯಕ್ಕಾಗಿ ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಿದರು.

ತಮಗೆ ಕಾನೂನುಬದ್ಧವಾಗಿ ದೊರೆಯಬೇಕಾದ ನಿವೃತ್ತಿ ಸೌಲಭ್ಯ ಹಾಗೂ ಬಾಕಿ ಹಣವನ್ನು ಶೀಘ್ರವಾಗಿ ಬಿಡುಗಡೆ ಮಾಡುವಂತೆ ಆಡಳಿತ ಮಂಡಳಿಯನ್ನು ಅವರು ಆಗ್ರಹಿಸಿದರು.

Related posts

ಉಜಿರೆ: ಹರೀಶ್ ಭಂಡಾರಿ ನಿಧನ

Suddi Udaya

ವೇಣೂರು ತಾಲೂಕು ಕೇಂದ್ರದಿಂದ ವಿವಿಧ ಉಪವಸತಿಗಳಿಗೆ ರಾಮಮಂತ್ರಾಕ್ಷತೆಯ ಕಲಶಗಳ ಹಸ್ತಾಂತರ

Suddi Udaya

ತಾಲೂಕು ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ: ನೂತನ ಅಧ್ಯಕ್ಷರಾಗಿ ಭಗೀರಥ ಜಿ. ಆಯ್ಕೆ

Suddi Udaya

ಮಧ್ವ ಓಂಕಾರ ಫ್ರೆಂಡ್ಸ್ ಹಾಗೂ ಓಂಕಾರ ಮಹಿಳಾ ಘಟಕದ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ

Suddi Udaya

ಹಾಡುಹಗಲೇ ಚಾರ್ಮಾಡಿ ಘಾಟಿಯಲ್ಲಿ ಸಂಚರಿಸಿ ಆತಂಕ ಸೃಷ್ಟಿದ ಕಾಡಾನೆ: ಬೈಕ್ ಸವಾರ ಅಪಾಯದಿಂದ ಪಾರು

Suddi Udaya
error: Content is protected !!