32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.14-16: ಉಜಿರೆಯಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಉಜಿರೆ: ಉಜಿರೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಶ್ರೀ ಶಾರದಾ ಮಂಟಪದಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.14ರಿಂದ 16ರವರೆಗೆ ವಿವಿಧ ಧಾರ್ಮಿಕ, ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಸೆ.14ರಂದು ಬೆಳಿಗ್ಗೆ ಶ್ರೀ ಜನಾರ್ದನ ಸ್ವಾಮಿ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಿ ಶ್ರೀ ಶಾರದಾ ಮಂಟಪದಲ್ಲಿ ಶ್ರೀ ಗಣಪತಿ ಹವನ, ಶ್ರೀ ಗಣಪತಿ ಮೂರ್ತಿ ಪ್ರತಿಷ್ಠೆ ನಡೆಯಲಿದೆ. ಈ ಸಂದರ್ಭದಲ್ಲಿ ಉಜಿರೆಯ ಸಂಪತ್ ರತ್ನ ರಾವ್ ಮತ್ತು ಶಿವಶಂಕರ ಕುಡ್ವ ಉಪಸ್ಥಿತರಿರುವರು. ಶಾಲಾ ಮಕ್ಕಳು ಹಾಗೂ ಸಾರ್ವಜನಿಕರಿಗಾಗಿ ಭಕ್ತಿಗೀತೆ ಸ್ಪರ್ಧೆ, ಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ರಂಗವಲ್ಲಿ ಸ್ಪರ್ಧೆ, ಹಗ್ಗ ಜಗ್ಗಾಟ ಸ್ಪರ್ಧೆ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿವೆ.

ಸೆ.15ರಂದು ಬೆಳಿಗ್ಗೆ ಗಣಪತಿ ಹವನ, ವಿವಿಧ ಭಜನಾ ತಂಡಗಳಿAದ ಭಜನಾ ಕಾರ್ಯಕ್ರಮ, ಉಪ್ಪಿನಂಗಡಿಯ ಸ್ಕಂದ ಮ್ಯೂಸಿಕಲ್ ತಂಡದಿAದ ಭಕ್ತಿಗೀತೆ, ರಸಮಂಜರಿ ಹಾಗೂ ರಾತ್ರಿ ಆಯ್ದ ನೃತ್ಯ ತಂಡಗಳಿAದ “ನೃತ್ಯ ಝೇಂಕಾರ” ನೃತ್ಯ ಕಾರ್ಯಕ್ರಮ ನಡೆಯಲಿದೆ.

ಸೆ.16ರಂದು ಬೆಳಿಗ್ಗೆ ೧೦೮ ತೆಂಗಿನಕಾಯಿ ಗಣಪತಿ ಹವನ ಹಾಗೂ ಪೂರ್ಣಾಹುತಿ, ಅಪರಾಹ್ನ ಸಂತೋಷ್ ಆಚಾರ್ಯ ಅತ್ತಾಜೆ ಅವರಿಂದ ಭಕ್ತಿನಾದ ಜಾನಪದ ಗಾಯನ ಹಾಗೂ ಸಂಜೆ ಭಜನಾ ಕಾರ್ಯಕ್ರಮ ನಡೆಯಲಿದೆ. ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯರ ಗೌರವ ಉಪಸ್ಥಿತಿ, ಸಮಿತಿ ಅಧ್ಯಕ್ಷ ರಾಮಣ್ಣ ಗೌಡ ಅವರ ಅಧ್ಯಕ್ಷತೆಯಲ್ಲಿ ಬಹುಮಾನ ವಿತರಣೆ ನಡೆಯಲಿದೆ.


ಸಂಜೆ ಆಕರ್ಷಕ ಸ್ಥಬ್ಧ ಚಿತ್ರಗಳು, ಸುಡುಮದ್ದು ಪ್ರದರ್ಶನ ಹಾಗೂ ವಿವಿಧ ಭಜನಾ ತಂಡಗಳ ಕುಣಿತ ಭಜನೆಯೊಂದಿಗೆ ಶ್ರೀ ಮಹಾಗಣಪತಿ ದೇವರ ಶೋಭಾಯಾತ್ರೆ ನಗರದಲ್ಲಿ ಸಾಗಿಬಂದು ದೇವಸ್ಥಾನದ ಪುಷ್ಕರಣಿ ಕೆರೆಯಲ್ಲಿ ವಿಸರ್ಜಿಸಲ್ಪಡಲಿದೆ.

Related posts

ಉಜಿರೆ ನಿನ್ನಿಕಲ್ಲು 33/11 ಕೆ.ವಿ ವಿದ್ಯುತ್ ಉಪಕೇಂದ್ರದ ಕಾಮಗಾರಿ ಶೀಘ್ರ ಆರಂಭ: ನಿನ್ನಿಕಲ್ಲಿನಲ್ಲಿ 0.96 ಎಕ್ರೆ ಜಾಗ ಮಂಜೂರು: ರೂ. 46.66 ಲಕ್ಷ ಸ್ಥಳ ಮೌಲ್ಯ ಪಾವತಿಗೆ ಸೂಚನೆ

Suddi Udaya

ಕಿಲ್ಲೂರಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಹೋರಿ ಸಾವು

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಗೆ 11 ಸ್ಥಾನ, ಕಾಂಗ್ರೆಸ್ ಬೆಂಬಲಿತ 1 ಸ್ಥಾನ

Suddi Udaya

ಗುರುವಾಯನಕೆರೆ: ಆಟಿ ಡೊಂಜಿ ಕೆಸರದ ಗೊಬ್ಬು ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತೆಂಕಕಾರಂದೂರು ಪಳಿಕೆ ಲೀಲಾವತಿ ಶೆಟ್ಟಿ ನಿಧನ

Suddi Udaya

ಸರ್ಕಾರಿ ಕರ್ತವ್ಯದ ವೇಳೆ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನ ಖಂಡನೀಯ: ಜಯಕೀರ್ತಿ ಜೈನ್

Suddi Udaya
error: Content is protected !!